ಕರ್ನಾಟಕ

karnataka

ETV Bharat / state

ಬೆಳಗಾವಿ: ಮದುವೆಯಾದ ಏಳೇ ದಿನಕ್ಕೆ ನೇಣಿಗೆ ಶರಣಾದ ಯುವಕ

ಮದುವೆಯಾದ ಏಳನೇ ದಿನಕ್ಕೆ ಖಾನಾಪೂರ ತಾಲೂಕಿನ ಲಕ್ಕೇಬೈಲ್ ಗ್ರಾಮದ ಯುವಕ ದೇಮಪ್ಪ ಅರ್ಜುನ್ ಸನದಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By

Published : Jun 17, 2022, 10:15 PM IST

ಯುವಕ ನೇಣಿಗೆ ಶರಣು
ಯುವಕ ನೇಣಿಗೆ ಶರಣು

ಬೆಳಗಾವಿ:ಮದುವೆಯಾದ ಏಳೇ ದಿನಕ್ಕೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಖಾನಾಪೂರ ತಾಲೂಕಿನ ಲಕ್ಕೇಬೈಲ್ ಗ್ರಾಮದಲ್ಲಿ ನಡೆದಿದೆ. ಖಾನಾಪೂರ ತಾಲೂಕಿನ ಲಕ್ಕೇಬೈಲ್ ಗ್ರಾಮದ ದೇಮಪ್ಪ ಅರ್ಜುನ್ ಸನದಿ (23) ಮೃತ ಯುವಕ. ಮೃತ ದೇಮಪ್ಪ ಕಳೆದ ವಾರವಷ್ಟೇ ತನ್ನ ಸೋದರತ್ತೆಯ ಮಗಳನ್ನು ಮದುವೆಯಾಗಿದ್ದನು‌. ತನ್ನ ಸಂಬಂಧಿಕರ ಮನೆಗೆ ಹೋಗಿ ರಾತ್ರಿ ಮನೆಗೆ ಮರಳಿದ್ದ ಬಳಿಕ ಮಧ್ಯರಾತ್ರಿ ಮಲಗುವ ಕೊಠಡಿಯಲ್ಲಿ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾನೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಖಾನಾಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದೇಮಪ್ಪನ ಪತ್ನಿ ಹಾಗೂ ಆಕೆಯ ಪಾಲಕರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ:ಕಲಬುರಗಿ : ಕುಡಿಯುವ ನೀರಿನೊಂದಿಗೆ ಕಸಕಡ್ಡಿ, ಹುಳು ಫ್ರೀ : ಜನ ರೋಗಗ್ರಸ್ತರಾದ್ರೂ ಅಧಿಕಾರಿಗಳು ಡೋಂಟ್ ಕೇರ್!

ABOUT THE AUTHOR

...view details