ಕರ್ನಾಟಕ

karnataka

ಬೈಕ್ ಸವಾರನ ಓವರಟೇಕ್ ಎಡವಟ್ಟು: ಹಿಂಬದಿ ಯುವಕ ಬಸ್​​​ ಚಕ್ರಕ್ಕೆ ಸಿಲುಕಿ‌ ಸ್ಥಳದಲ್ಲೇ ಸಾವು

By

Published : Dec 29, 2021, 9:27 PM IST

ಚಿಕ್ಕೋಡಿಯಲ್ಲಿ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Youth died by road accident in Chikodi
ಚಿಕ್ಕೋಡಿ ರಸ್ತೆ ಅಪಘಾತದಲ್ಲಿ ಯುವಕ ಸಾವು

ಚಿಕ್ಕೋಡಿ:ಬಸ್​​ ಚಕ್ರಕ್ಕೆ ಸಿಲುಕಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಚಿಕ್ಕೋಡಿ ರಸ್ತೆ ಅಪಘಾತದಲ್ಲಿ ಯುವಕ ಸಾವು

ಕಾಗವಾಡದ ನಿಖಿಲ್ ಪಾಟೀಲ ಮೃತ ಯುವಕ ಎಂದು ಗುರುತಿಸಲಾಗಿದ್ದು, ತಾಲೂಕಿನ ಹಾರೋಗೇರಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಬಸ್​​ ಅನ್ನು ಓವರ್​ಟೇಕ್​ ಮಾಡುವ ವೇಳೆ ಬೈಕ್​ ಹಿಂಬದಿ ಕುಳಿತ್ತಿದ್ದ ಯುವಕ ಆಯತಪ್ಪಿ ಬಿದ್ದು ಬಸ್​ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ಬೈಕ್​ ಸವಾರ ಪರಾರಿಯಾಗಿದ್ದು, ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿಂದು ಕೊರೊನಾ ಸ್ಫೋಟ : ಒಂದೇ ದಿನ 566 ಮಂದಿಗೆ ಸೋಂಕು ದೃಢ

ABOUT THE AUTHOR

...view details