ಕರ್ನಾಟಕ

karnataka

ETV Bharat / state

ವಿಜಯನಗರ : ಸಿಡಿಲು ಬಡಿದು 17 ಕುರಿಗಳು ಸಾವು - ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಸಿಡಿಲು ಬಡಿದು 17ಕ್ಕೂ ಹೆಚ್ಚು ಕುರಿಗಳು ಮತ್ತು ಒಂದು ನಾಯಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ..

sheep died due to thunderbolt in Vijayanagar
ಸಿಡಿಲು ಬಡಿದು 17 ಕುರಿಗಳು ಸಾವು

By

Published : Apr 23, 2022, 6:58 AM IST

ವಿಜಯನಗರ :ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಶುಕ್ರವಾರ ಸಿಡಿಲು ಬಡಿದು 17ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. 15ಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿವೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಸಿಡಿಲಿಗೆ ಬಲಿಯಾದ ಆಕಳು

ತೆಲಿಗಿ ಗ್ರಾಮದ ಕೆರೆಯ ಮೇಲೆ ಕುರಿಗಳು ಮೇಯಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಒಂದು ನಾಯಿ ಕೂಡ ಸಾವನ್ನಪ್ಪಿದೆ ಎನ್ನಲಾಗ್ತಿದೆ. ರೈತ ತಿಪ್ಪೇಶಪ್ಪ, ಮಂಜುನಾಥ, ತಳವಾರ ರೇವಣ್ಣಪ್ಪ ಅವರಿಗೆ ಸೇರಿದ ಕುರಿಗಳಾಗಿವೆ.

ಲಕ್ಷಾಂತರ ರೂ.ಮೌಲ್ಯದ ಕುರಿಗಳನ್ನು ಕಳೆದುಕೊಂಡ ಕುರಿಗಾಯಿ ಕುಟುಂಬ ಕಣ್ಣೀರಿಡುತ್ತಿದೆ. ಇನ್ನೂ ಕಂಚಿಕೇರಿ ಗ್ರಾಮದಲ್ಲೂ ಸಿಡಿಲಿಗೆ ಒಂದು ಆಕಳು ಬಲಿಯಾಗಿದೆ ಎಂದು ತಿಳಿದು ಬಂದಿದೆ.

ABOUT THE AUTHOR

...view details