ಕರ್ನಾಟಕ

karnataka

ETV Bharat / state

26ನೇ ದಿನಕ್ಕೆ ಕಾಲಿಟ್ಟ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯ ಧರಣಿ - 26th day of the Bellary District fighting Committee protest

ಬಳ್ಳಾರಿ ಜಿಲ್ಲೆಯ ವಿಭಜನೆಗೆ ಸಚಿವರಾದ ಶ್ರೀರಾಮುಲು, ಆನಂದ ಸಿಂಗ್, ಶಾಸಕ ಸೋಮಶೇಖರ್ ರೆಡ್ಡಿ ಅವರೆಲ್ಲಾ ಕುತಂತ್ರ ಮಾಡಿ ಡ್ರಾಮಾ ಮಾಡುತ್ತಿದ್ದಾರೆ ಎಂದು ಜೆ‌. ಎಸ್.ಆಂಜನೇಯಲು ಆರೋಪ ಮಾಡಿದ್ದಾರೆ.

ಜಿಲ್ಲಾ ಟಾಸ್ಕ್ ಫೋರ್ಸ್‌ ಸಮಿತಿಯ ಅಧ್ಯಕ್ಷ ಜೆ‌. ಎಸ್. ಆಂಜನೇಯಲು ಆರೋಪ
ಜಿಲ್ಲಾ ಟಾಸ್ಕ್ ಫೋರ್ಸ್‌ ಸಮಿತಿಯ ಅಧ್ಯಕ್ಷ ಜೆ‌. ಎಸ್. ಆಂಜನೇಯಲು ಆರೋಪ

By

Published : Jan 8, 2021, 9:29 PM IST

ಬಳ್ಳಾರಿ:ಸಚಿವರಾದ ಶ್ರೀರಾಮುಲು, ಆನಂದ ಸಿಂಗ್, ಶಾಸಕ ಸೋಮಶೇಖರ್ ರೆಡ್ಡಿ ಬಳ್ಳಾರಿ ಜಿಲ್ಲೆ ವಿಭಜನೆಗೆ ಕುತಂತ್ರ ಮಾಡಿ ಡ್ರಾಮಾ ಮಾಡುತ್ತಿದ್ದಾರೆ ಎಂದು ಜಿಲ್ಲಾ ಟಾಸ್ಕ್ ಫೋರ್ಸ್‌ ಸಮಿತಿಯ ಅಧ್ಯಕ್ಷ ಜೆ‌. ಎಸ್. ಆಂಜನೇಯಲು ಆರೋಪಿಸಿದ್ದಾರೆ.

ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯ ಧರಣಿ

ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ, ಬಳ್ಳಾರಿ ಅಖಿಲ ಕರ್ನಾಟಕ ಕಮ್ಮ ಯುವಶಕ್ತಿ ಹಾಗೂ ಕಮ್ಮ ಮಹಾಜನ ಸಂಘದಿಂದ ಬಳ್ಳಾರಿ ಜಿಲ್ಲಾ ಅಖಂಡ ಹೋರಾಟ ಸಮಿತಿಯ ಅನಿರ್ದಿಷ್ಟಾವಧಿ ಹೋರಾಟ ಬೆಂಬಲಿಸಿ ಸಂಘದ ನೇತೃತ್ವದಲ್ಲಿ ಇಂದು ಬಳ್ಳಾರಿ ಜಿಲ್ಲೆ ವಿಭಜನೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಓದಿ:ಬಳ್ಳಾರಿಯಲ್ಲಿ ಅನಿರ್ದಿಷ್ಟಾವಧಿ ಧರಣಿ; ಅಖಿಲ ಕರ್ನಾಟಕ ಕಮ್ಮ ಯುವಶಕ್ತಿ ಸಂಘ ಸಾಥ್​​

ಬಳ್ಳಾರಿ ಜಿಲ್ಲೆ ವಿಭಜನೆಯನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ 26ನೇ ದಿನದ ಅನಿದಿಷ್ಟಾವಧಿ ಧರಣಿ ನಡೆಯುತ್ತಿದೆ.

ABOUT THE AUTHOR

...view details