ಕರ್ನಾಟಕ

karnataka

By

Published : Oct 11, 2022, 9:51 AM IST

ETV Bharat / state

ಬಳ್ಳಾರಿಯ ಸಾರ್ವಜನಿಕ ಸ್ಥಳದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನ

ವ್ಯಕ್ತಿಯೊಬ್ಬ ಸಾರ್ವಜನಿಕ ಸ್ಥಳದಲ್ಲಿ ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವ ಘಟನೆ ನಡೆದಿದೆ

man suicide attempting in public place  suicide attempting in public place at Bellary  Man petrol pouring on self  ಪಬ್ಲಿಕ್​ ಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ  ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ  ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ
ಪಬ್ಲಿಕ್​ ಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಬಳ್ಳಾರಿ:ನಗರದ ರೈಲು ನಿಲ್ದಾಣ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ನಾಲಗಡ್ಡೆದ ನಿವಾಸಿ ಮಹಮ್ಮದ್‌ ಉಸ್ಮಾನ್ ಬಾಷ (50) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದುಬಂದಿದೆ.

ಮಹಮ್ಮದ್‌ ಉಸ್ಮಾನ್ ಬಾಷ ಕೌಟುಂಬಿಕ ಸಮಸ್ಯೆಯಿಂದ ಮನನೊಂದು ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ಪಕ್ಕದ ಬಂಕ್​ನಿಂದ ಪೆಟ್ರೋಲ್ ತಂದು ಮೈಮೇಲೆ ಸುರಿದು ಬೆಂಕಿ ಹಚ್ಚಿಕೊಂಡ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪಬ್ಲಿಕ್​ ಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಕ್ಷಣಾರ್ಧದಲ್ಲಿ ಅರ್ಧಕ್ಕಿಂತ ಹೆಚ್ಚು ದೇಹ ಸುಟ್ಟಹೋಗಿದೆ. ಈ ವೇಳೆ ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸುವ ಬದಲಾಗಿ ಮೊಬೈಲ್‌ಗಳಲ್ಲಿ ಈ ದೃಶ್ಯವನ್ನು ಚಿತ್ರಿಕರಿಸಿಕೊಂಡಿದ್ದಾರೆ. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈ ಕುರಿತು ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ:ಕೌಟುಂಬಿಕ ಕಲಹ : ವಿಜಯಪುರದಲ್ಲಿ ಕೆನಾಲ್​ಗೆ ಹಾರಿ ಕೆಎಸ್ಆರ್​ಟಿಸಿ ನೌಕರ ಆತ್ಮಹತ್ಯೆ

ABOUT THE AUTHOR

...view details