ಕರ್ನಾಟಕ

karnataka

By

Published : Jun 9, 2020, 4:47 PM IST

ETV Bharat / state

ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂ. ಪ್ರೋತ್ಸಾಹಧನ ವಿತರಣೆ..

ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿಗಳಿಂದ ಒಟ್ಟು12 ಲಕ್ಷದ 6 ಸಾವಿರ ರೂ. ನೀಡಲಾಗುತ್ತಿದೆ. ಇಂದು 30 ಆಶಾ ಕಾರ್ಯಕರ್ತೆಯರಿಗೆ ಸಾಂಕೇತಿಕವಾಗಿ 3 ಸಾವಿರ ರೂ. ಚೆಕ್ ನೀಡಲಾಗಿದೆ. ನಾಳೆ ಸಂಜೆ ಒಳಗೆ ಎಲ್ಲಾ ಆಶಾ ಕಾರ್ಯಕರ್ತೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದರು.

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ
ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ

ಬಳ್ಳಾರಿ :ಜಿಲ್ಲೆಯ ಸೌಹಾರ್ದ ಸಹಕಾರಿ ಬ್ಯಾಂಕ್​​ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಗೌರವ ವಂದನೆ ಹಾಗೂ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ನಡೆಯಿತು. ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ವಿಶ್ವನಾಥ ಹಿರೇಮಠ ಅವರು ಮಾತನಾಡಿ, ಜಿಲ್ಲೆಯಲ್ಲಿ ಇರುವ 2050 ಆಶಾ ಕಾರ್ಯಕರ್ತೆಯರಿಗೆ ಸೌಹಾರ್ದ ಸಹಕಾರಿಗಳಿಂದ 3 ಸಾವಿರ ರೂ. ಚೆಕ್ ವಿತರಣೆ ಮಾಡಲಾಯಿತು.

ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿಗಳಿಂದ ಒಟ್ಟು12 ಲಕ್ಷದ 6 ಸಾವಿರ ರೂ. ನೀಡಲಾಗುತ್ತಿದೆ. ಇಂದು 30 ಆಶಾ ಕಾರ್ಯಕರ್ತೆಯರಿಗೆ ಸಾಂಕೇತಿಕವಾಗಿ 3 ಸಾವಿರ ರೂ. ಚೆಕ್ ನೀಡಲಾಗಿದೆ. ನಾಳೆ ಸಂಜೆ ಒಳಗೆ ಎಲ್ಲಾ ಆಶಾ ಕಾರ್ಯಕರ್ತೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದರು.

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ

ರಾಜ್ಯ ಸರ್ಕಾರಕ್ಕೆ ಆದಾಯದ ಮೂಲಗಳು ಇಲ್ಲ. ಸರ್ಕಾರದ ಆದೇಶದ ಮೇರೆಗೆ ಆಶಾ ಕಾರ್ಯಕರ್ತೆಯರಿಗೆ ಈ ರೀತಿಯ ಪ್ರೋತ್ಸಾಹಧನವನ್ನು ನೀಡುತ್ತಿದ್ದೇವೆ. ಸಹಕಾರಿ ಸಚಿವ ಎಸ್‌ ಟಿ ಸೋಮಶೇಖರ್ ಅವರಿಗೆ ಸರ್ಕಾರ ಮನವಿ ಮಾಡಿಕೊಂಡಿದ್ದರಿಂದ ಈ ಕಾರ್ಯ ನಡೆಯುತ್ತಿದೆ ಎಂದರು.

ಆಶಾಕಾರ್ಯಕರ್ತೆ ಬಸಮ್ಮ ಮಾತನಾಡಿ, ಜಿಲ್ಲಾಡಳಿತದಿಂದ ಕೊರೊನಾ ವೈರಸ್‌ ಮುಂಜಾಗೃತೆ ದೃಷ್ಟಿಯಿಂದ ಮಾಸ್ಕ್, ಸ್ಯಾನಿಟೈಜರ್ ನೀಡಿದ್ದಾರೆ. ಸಹಕಾರಿ ಬ್ಯಾಂಕ್​​ಗಳಿಗೆ 3 ಸಾವಿರ ರೂ. ಚೆಕ್ ವಿತರಣೆ ಮಾಡಿದ್ದು ಖುಷಿ ತಂದಿದೆ. ಮುಂದೆನೂ ಕೆಲಸ ಮಾಡುವ ಹುಮ್ಮಸ್ಸು ಇದೆ ಎಂದರು.

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ

ಸುಕೋ ಬ್ಯಾಂಕ್​​ನ ಮುಖ್ಯಸ್ಥರು ಪರಿಮಳಾಚಾರ್ಯ ಮಾತನಾಡಿ, ಸಂಡೂರು ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ‌ ಮತ್ತು ಗೌರವ ಸನ್ಮಾನ ಮಾಡಲಾಗಿದೆ. ಸುಕೋ ಬ್ಯಾಂಕ್​​ನಿಂದ 100 ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ನೀಡಿದ್ದೇವೆ ಎಂದರು.

ABOUT THE AUTHOR

...view details