ಬಳ್ಳಾರಿ:ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಳೆದ ಆಗಸ್ಟ್ ತಿಂಗಳಿಂದ ಇ- ಆಫೀಸ್ ಅನುಷ್ಠಾನಗೊಂಡಿದ್ದು, ಕಡತಗಳ ವಿಳಂಬಕ್ಕೆ ಅಸ್ಪದವಿಲ್ಲದೇ ಶೀಘ್ರವಾಗಿ ವಿಲೇವಾರಿಯಾಗುತ್ತಿವೆ.
ಕಚೇರಿಯಲ್ಲಿ ತ್ವರಿತಗತಿಯಲ್ಲಿ ಕಡತಗಳ ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ಸಕಾಲದಲ್ಲಿ ಸ್ಪಂದಿಸುವ ಸಲುವಾಗಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಾಗಿಯೇ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು ಬೆಸ್ಟ್ ಎಂಪ್ಲಾಯಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ. ಪ್ರತಿ ತಿಂಗಳು ತಮ್ಮ ವ್ಯಾಪ್ತಿಗೆ ಬರುವ ಅರ್ಜಿಗಳು, ನಿಗದಿಪಡಿಸಿದ ಅವಧಿಯೊಳಗೆ ಕಡತಗಳ ವಿಲೇವಾರಿ ಮೂಲಕ ಸ್ಪಂದನೆ, ಇ-ಹಾಜರಾತಿ ಪ್ರಗತಿಯನ್ನು ಪರಿಶೀಲಿಸಿ ಮೂರು ಮಂದಿ ನೌಕರರಿಗೆ ಈ ಪ್ರಶಸ್ತಿ ನೀಡಿ ಸನ್ಮಾನಿಸಿದ್ದಾರೆ.