ಕರ್ನಾಟಕ

karnataka

ETV Bharat / state

ಕೊರೊನಾ ಮುನ್ನೆಚ್ಚರಿಕೆ : ಬಳ್ಳಾರಿಯಲ್ಲಿ ಮಾರ್ಚ್​ ಅಂತ್ಯದವರೆಗೆ ಸಂಪೂರ್ಣ ಬಂದ್ - ಬಳ್ಳಾರಿ

ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಬಳ್ಳಾರಿ ಜಿಲ್ಲೆಯಾದ್ಯಂತ ಹೈ ಅಲರ್ಟ್​ ಘೋಷಿಸಲಾಗಿದೆ. ಇಂದಿನಿಂದ ಮಾರ್ಚ್​ 31ರವರೆಗೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ.

press meet
ಸುದ್ದಿಗೋಷ್ಠಿ

By

Published : Mar 24, 2020, 5:18 AM IST

ಬಳ್ಳಾರಿ: ಕೊರೊನಾ ವೈರಸ್ ಸೋಂಕು ಜನತೆಗೆ ತಾಗಬಾರದು ಎಂಬ ಉದ್ದೇಶದಿಂದ ಇಂದಿನಿಂದ (ಮಂಗಳವಾರ) ಮಾರ್ಚ್ 31ರ ತನಕ ನಿಷೇಧಾಜ್ಞೆ ಜಾರಿಗೆ ತರಲಾಗುತ್ತಿದ್ದು, ಆದೇಶ ಉಲ್ಲಘಿಸಿದರೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆಯ ಸಂದೇಶ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು, ಆಹಾರ ಸಾಮಗ್ರಿ, ಕಿರಾಣಿ ಅಂಗಡಿ, ಹಾಲು, ತರಕಾರಿ, ಮಾಂಸ, ಮೀನು ಹಾಗೂ ಹಣ್ಣಿನ‌ ಮಾರುಕಟ್ಟೆ ಹೊರತುಪಡಿಸಿ ಉಳಿದ ಯಾವುದೇ ಅಂಗಡಿಗಳು ತೆರೆಯುವಂತಿಲ್ಲ. ಇಂದಿನಿಂದ (ಮಂಗಳವಾರ ) ಮಾರ್ಚ್ 31ರ ಮಧ್ಯ ರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ನಿಯಮ ಉಲ್ಲಂಘಿಸಿದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಅಗತ್ಯ ಸರಕು ಸಾಗಿಸುವ ವಾಹನಗಳು, ಅಗ್ನಿಶಾಮಕ ದಳ, ಸರ್ಕಾರಿ ಕಚೇರಿ, ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿ, ಅಂಚೆ ಕಚೇರಿ, ವಿದ್ಯುತ್, ಗ್ಯಾಸ್ ಸಿಲಿಂಡರ್ ಏಜೆನ್ಸಿ, ಪೆಟ್ರೋಲ್ ಬಂಕ್, ಜಲ ಮಂಡಳಿ, ಬ್ಯಾಂಕ್, ಎಟಿಎಂ ಹಾಗೂ ದೂರವಾಣಿ, ಎಪಿಎಂಸಿ, ಇಂದಿರಾ ಕ್ಯಾಂಟೀನ್, ಭತ್ತ ಖರೀದಿ ಕೇಂದ್ರ ಸೇರಿದಂತೆ ಇನ್ನಿತರೆ ಕೆಲ ಆಯ್ದ ವಲಯಗಳಿಗೆ ವಿನಾಯಿತಿ ನೀಡಲಾಗಿದೆ ಎಂದರು.

ABOUT THE AUTHOR

...view details