ಕರ್ನಾಟಕ

karnataka

By

Published : Jul 28, 2020, 9:31 AM IST

ETV Bharat / state

ನಿರ್ಮಾಣ ಹಂತದ ಸೇತುವೆ ದಿಢೀರ್​ ಕುಸಿತ: ಕಳಪೆ ಕಾಮಗಾರಿ ಆರೋಪ

ಹೊಸಪೇಟೆ ನಗರದ ಆರ್‌ಟಿಒ ಕಚೇರಿ ಮುಂಭಾಗದ ನಿರ್ಮಾಣ ಹಂತದಲ್ಲಿರುವ ಸೇತುವೆ ದಿಢೀರನೆ ಕುಸಿದಿದೆ. ಆದರೆ ಸೇತುವೆ ಕುಸಿತದಿಂದ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.

Bridge collapse under construction
ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿತ

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದ ಆರ್‌ಟಿಒ ಕಚೇರಿ ಮುಂಭಾಗದ ನಿರ್ಮಾಣ ಹಂತದಲ್ಲಿರುವ ಸೇತುವೆ ಸೋಮವಾರ ಸಂಜೆ ದಿಢೀರನೆ ಕುಸಿದಿದೆ.

ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿತ

ಈ ಸೇತುವೆ ಕುಸಿತದಿಂದ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಸೇತುವೆ ಕಾಮಗಾರಿಯಲ್ಲಿ 10ಕ್ಕಿಂತ ಹೆಚ್ಚು ಕಾರ್ಮಿಕರು ನಿರತರಾಗಿದ್ದರು ಎಂದು ತಿಳಿದು ಬಂದಿದೆ. ಹಳೆಯ ಸೇತುವೆಯನ್ನು ನೆಲಸಮಗೊಳಿಸಿ ಹೊಸ ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿತ್ತು.

ಈ ಕುರಿತು ಪ್ರತಿಕ್ರಿಯಿಸಲು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್​​ ಕಿಶೋರ್​ ನಿರಾಕರಿಸಿದ್ದಾರೆ. ಸೇತುವೆ ನಿರ್ಮಾಣ ಕಾಮಗಾರಿ ಕಳಪೆ‌ಮಟ್ಟದ್ದಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ABOUT THE AUTHOR

...view details