ಕರ್ನಾಟಕ

karnataka

ETV Bharat / state

ಬಳ್ಳಾರಿ: ಬಡವರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ ನ್ಯಾಯಾಧೀಶ - bellary districts court

ಲಾಕ್​ಡೌನ್​ ನಡುವೆ ಪೌರಕಾರ್ಮಿಕರು ಪ್ರತಿನಿತ್ಯ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲೆಯ ಪೌರಕಾರ್ಮಿಕರು ಸೇರಿದಂತೆ ಬಡವರಿಗೆ ಇಲ್ಲಿನ ಜಿಲ್ಲಾ ನ್ಯಾಯಲಯದ ನ್ಯಾಯಾಧೀಶರು ದಿನಸಿ ಕಿಟ್​ ವಿತರಿಸಿದ್ದಾರೆ.

Bellary District Court judge distributes food grain kit to poor people
ಬಡವರಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದ ಬಳ್ಳಾರಿ ಜಿಲ್ಲಾ ನ್ಯಾಯಾಧೀಶರು

By

Published : Apr 29, 2020, 7:42 PM IST

ಬಳ್ಳಾರಿ: ದೇಶದಾದ್ಯಂತ ಲಾಕ್​​ಡೌನ್ ಹಿನ್ನೆಲೆ ಬಡವರು ಹಾಗೂ ಅಗತ್ಯವಿರುವವರಿಗೆ ಅನೇಕರು ಸಹಾಯ ಹಸ್ತ ಚಾಚುತ್ತಿದ್ದಾರೆ. ಇದರಿಂತೆ ಜಿಲ್ಲೆಯ ನ್ಯಾಯಾಲಯದ ನ್ಯಾಯಾಧೀಶ ಅರ್ಜುನ ಎಸ್. ಮಲ್ಲೂರು ಮಹಾನಗರ ಪಾಲಿಕೆ ಆವರಣದಲ್ಲಿ ಪೌರಕಾರ್ಮಿಕರಿಗೆ ದಿನಸಿ ಕಿಟ್​ಗಳನ್ನು ಉಚಿತವಾಗಿ ವಿತರಣೆ ಮಾಡಿದರು.

ನಗರದ ಮಹಾನಗರ ಪಾಲಿಕೆಯ ಆವರಣದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅರ್ಜುನ್ ಮಲ್ಲೂರು, ಪೌರ ಕಾರ್ಮಿಕರು ಬೆಳಗ್ಗೆ 6 ಗಂಟೆಗೆ ಬಂದು ನಗರವನ್ನು ಸ್ವಚ್ಛ ಮಾಡುತ್ತಾರೆ. ಕೊರೊನಾ ವೈರಸ್ ಬಗ್ಗೆ ಮುಂಜಾಗ್ರತಾ ದೃಷ್ಟಿಯಿಂದ ಮೊದಲು ನಗರವನ್ನು ಸ್ವಚ್ಛ ಮಾಡುವ ಪೌರಕಾರ್ಮಿಕರು ಸ್ವಚ್ಛವಾಗಿರಬೇಕು. ನಿಮ್ಮ ಆರೋಗ್ಯ ಸಹ ಬಹಳ ಮುಖ್ಯ. ಆನಂತರ ನಗರ ಸ್ವಚ್ಛತೆಗೆ ಮುಂದಾಗಬೇಕು ಎಂದರು. ಲಾಕ್​​ಡೌನ್ ಇನ್ನೂ ಸಂಪೂರ್ಣವಾಗಿ ಸಡಲಿಕೆಯಾಗಿಲ್ಲ. ಜನರು ಸಹ ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಬಳಸಬೇಕು ಎಂದರು.

ಇನ್ನು ದಿನಸಿ ಕಿಟ್​ ವಿತರಣೆ ವೇಳೆ ಲಾಕ್​ಡೌನ್​ ಉಲ್ಲಂಘನೆಯಾಗಿದೆ.ಮಹಾನಗರ ಪಾಲಿಕೆಯ ಆವರಣದಲ್ಲಿ ನೂರಾರು ಬೈಕ್​ಗಳು ನಿಲ್ಲುವುದಕ್ಕೂ ಸ್ಥಳ ಇಲ್ಲದ ಪರಿಸ್ಥಿತಿ ಎದುರಾಗಿತ್ತು ಎನ್ನಲಾಗಿದೆ.

ABOUT THE AUTHOR

...view details