ಕರ್ನಾಟಕ

karnataka

ETV Bharat / state

ಕೋವಿಡ್ ಅವ್ಯವಹಾರ ಆಗಿದ್ರೆ ದಾಖಲೆ ನೀಡಿ: ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ - bellary ZP prasident Bharti Thimmareddy

ಬಳ್ಳಾರಿಯಲ್ಲಿಂದು ಜಿಪಂ ಅಧ್ಯಕ್ಷೆ ಸಿ. ಭಾರತಿ ತಿಮ್ಮಾರೆಡ್ಡಿ ಅವರ ನೇತೃತ್ವದಲ್ಲಿ ಸಾಮಾನ್ಯ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕೋವಿಡ್​ ನಿಯಂತ್ರಣ ಕುರಿತ ದೂರು, ಆಕ್ಸಿಜನ್ ಪೂರೈಕೆ, ಯೂರಿಯಾ ಸಮರ್ಪಕ ಪೂರೈಕೆ ಹಾಗೂ ಕ್ರಿಡಾಂಗಣ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆಸಲಾಯಿತು.

bellary-zp-general-meeting
ಜಿ.ಪಂ ಸಾಮಾನ್ಯ ಸಭೆ

By

Published : Aug 29, 2020, 10:01 PM IST

ಬಳ್ಳಾರಿ : ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆ. ಕೋವಿಡ್ ಊಟ, ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ, ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ದೂರುಗಳಿದ್ದರೆ, ದಾಖಲೆಗಳನ್ನು ಒದಗಿಸಿ ಅವುಗಳನ್ನು ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಜಿಪಂ ಅಧ್ಯಕ್ಷೆ ಸಿ. ಭಾರತಿ ತಿಮ್ಮಾರೆಡ್ಡಿ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಜಿ.ಪಂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೊನಾ ಸಂಬಂಧಿಸಿದಂತೆ ಇನ್ನಷ್ಟು ಐಇಸಿ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳುವಂತೆ ಡಿಎಚ್‍ಒ ಅವರಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಕೋವಿಡ್ ಸಂಬಂಧಿತ ಎಸ್‍ಒಪಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದರು.

ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ಇದುವರೆಗೆ 20ಸಾವಿರ ಪ್ರಕರಣಗಳು ದೃಢಪಟ್ಟಿದ್ದು, ಅವುಗಳಲ್ಲಿ 15,500ಕ್ಕೂ ಹೆಚ್ಚು ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದರು. ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ಆಕ್ಸಿಜನ್ ಉತ್ಪಾದನೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಾಗುತ್ತಿದೆ. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಗೆ ನಮ್ಮಿಂದ ನೀಡಲಾಗುತ್ತಿದೆ ಎಂದು ಜಿಪಂ ಸದಸ್ಯ ಮಾನಯ್ಯ, ವೆಂಕಟೇಶ ಹಾಗೂ ಇನ್ನಿತರರು ಸಭೆಯಲ್ಲಿ ಪ್ರಸ್ತಾಪಿಸಿದಕ್ಕೆ ಉತ್ತರಿಸಿದರು.

ಜಿ.ಪಂ ಸಾಮಾನ್ಯ ಸಭೆ
ಯೂರಿಯಾ ಸಮರ್ಪಕ ಪೂರೈಕೆಗೆ ಸೂಚನೆ:ಜಿಲ್ಲೆಯಲ್ಲಿ 965 ರೆಮ್ಡಿಸಿವಿಯರ್ ಇಂಜೆಕ್ಷನ್‍ಗಳು ನಮ್ಮಲ್ಲಿದ್ದು, ತಾಲೂಕು ಆಸ್ಪತ್ರೆಗಳಿಗೆ ತಲಾ 30 ರೆಮ್ಡಿಸಿವಿಯರ್ ಇಂಜೆಕ್ಷನ್‍ಗಳು ಒದಗಿಸಲಾಗಿದೆ. ಇನ್ನೂ ಅಗತ್ಯವಿರುವಷ್ಟು ಒದಗಿಸಲಾಗುವುದು ಮತ್ತು ಹೈಫ್ಲೋ ಆಕ್ಸಿಜನ್ ವ್ಯವಸ್ಥೆ ಪ್ರಮಾಣ ಹೆಚ್ಚಳಕ್ಕೂ ಗಮನಹರಿಸಲಾಗುವುದು ಎಂದು ಡಿಎಚ್‍ಒ ಡಾ.ಜನಾರ್ಧನ್ ಅವರು ವಿವರಿಸಿದರು.

ಜಿಲ್ಲೆಯ ರೈತರಿಗೆ ಸಮರ್ಪಕ ಪ್ರಮಾಣದಲ್ಲಿ ಯೂರಿಯಾ ಗೊಬ್ಬರವನ್ನು ಪೂರೈಸಬೇಕು: ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡುವಂತಿಲ್ಲ ಎಂದು ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯೂರಿಯಾ ಗೊಬ್ಬರವನ್ನು ನಮ್ಮ ಜಿಲ್ಲೆಯಿಂದ ಬೇರೆ ಜಿಲ್ಲೆಗಳಿಗೆ ರವಾನಿಸಲಾಗುತ್ತಿದೆ ಮತ್ತು ಕಾಳಸಂತೆಯಲ್ಲಿ ಅಧಿಕ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದ್ದು, ಇದಕ್ಕೆ ಅಧಿಕಾರಿಗಳು ಕಡಿವಾಣ ಹಾಕಬೇಕು ಎಂದು ಸೂಚಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಮಲ್ಲಿಕಾರ್ಜುನ ಅವರು ಬಳ್ಳಾರಿ ಜಿಲ್ಲೆಗೆ 12 ಸಾವಿರ ಮೆಟ್ರಿಕ್ ಟನ್ ಯೂರಿಯಾ ಅಗತ್ಯವಿದ್ದು,ಇಂದಿನವರೆಗೆ 11100 ಮೆಟ್ರಿಕ್ ಟನ್ ಯೂರಿಯಾ ಬಂದಿದೆ ಇನ್ನೇರಡು ದಿನಗಳಲ್ಲಿ 2600 ಮೆಟ್ರಿಕ್ ಟನ್ ಕೂಡ ಬರಲಿದೆ. ಜಿಲ್ಲೆಯಲ್ಲಿರುವ ಎಲ್ಲ ರೈತರಿಗೆ ಈ ವಾರದಲ್ಲಿ ಯೂರಿಯಾ ಗೊಬ್ಬರವನ್ನು ಸಮರ್ಪಕವಾಗಿ ಪೂರೈಸಲಾಗುವುದು ಎಂದು ಅವರು ತಿಳಿಸಿದರು.

ಕ್ರೀಡಾಂಗಣಗಳನ್ನು ಅಭಿವೃದ್ಧಿ ಪಡಿಸಲು ಅನುದಾನ ಹೆಚ್ಚು ಬಿಡುಗಡೆ ಮಾಡಿ

ಬಳ್ಳಾರಿ ನಗರಕ್ಕೆ ಕ್ರೀಡಾಂಗಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡದೇ, ಕ್ರಿಡೆಯಲ್ಲಿ ಹಿಂದುಳಿದ ತಾಲೂಕುಗಳಾದ ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಹರಪನಹಳ್ಳಿ ಕ್ರೀಡಾಂಗಣಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಪಡಿಸಿ ಎಂದು ಸದಸ್ಯರು ಕೇಳಿಕೊಂಡರು.

ಕಂಪ್ಲಿ ತಾಲೂಕು ಅಭಿವೃದ್ಧಿ ಹಣಕಾಸು ಇಲ್ಲವೇ?

ಕಂಪ್ಲಿ ತಾಲೂಕಿನ ತಾಲೂಕು ಪಂಚಾಯತಿ ಅಧ್ಯಕ್ಷೆ ಉಮಾದೇವಿ ಮಾತನಾಡಿ, ಕಂಪ್ಲಿ ತಾಲೂಕು ರಚನೆಯಾಗಿ ಐದಾರು ತಿಂಗಳು ಆಗಿದೆ. ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳು ಕುಳಿತುಕೊಳ್ಳಲು ಸ್ಥಳದ ಪ್ರಮಾಣ ಕಡಿಮೆ ಇದೆ. ಅಭಿವೃಧ್ಧಿಗೆ ಒಂದು ರೂಪಾಯಿ ಸಹ ಬಿಡುಗಡೆಯಾಗಿಲ್ಲ‌. ಐದು ತಿಂಗಳಿಂದ ಯಾವುದೇ ಜಿಲ್ಲಾ ಪಂಚಾಯತಿಯಿಂದ ಅನುದಾನ ದೊರೆತ್ತಿಲ್ಲ ಎಂದರು.

ABOUT THE AUTHOR

...view details