ಬಳ್ಳಾರಿ: ಭೋವಿ ವಡ್ಡರ ಸಮಾಜದ ಅಭಿವೃದ್ಧಿಗೆ ಸಮುದಾಯ ಭವನ, ಹಾಸ್ಪೆಲ್ ಸೌಲಭ್ಯ ಅಗತ್ಯವಿದೆ. ಹಾಗಾಗಿ ಸರ್ಕಾರ ಈ ಸೌಲಭ್ಯಗಳನ್ನು ನೀಡಬೇಕು ಎಂದು ಜಿಲ್ಲಾ ಭೋವಿ ವಡ್ಡರ ಸಂಘದ ಪ್ರಧಾನ ಕಾರ್ಯದರ್ಶಿ ಗಾದಿಲಿಂಗ ಮನವಿ ಮಾಡಿದರು.
ನಗರದ ಬಿಡಿಎಎ ಒಳ ಸಭಾಂಗಣದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ರಾಜ್ಯದ ಅನೇಕ ಸಮಾಜಗಳಿಗೆ ಸರ್ಕಾರದ ಕಡೆಯಿಂದ ಸಮುದಾಯ ಭವನಗಳು, ಕಲ್ಯಾಣ ಮಂಟಪಗಳು, ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಸ್ಟೆಲ್ಗಳು, ಜನರಿಗೆ ಮನೆಗಳು ಇವೆ. ಆದ್ರೆ ಬಳ್ಳಾರಿ ಜಿಲ್ಲೆಯಲ್ಲಿನ ಭೋವಿ ಸಮಾಜದ ಜನರಿಗೆ ಸಮುದಾಯ ಭವನ, ಕಲ್ಯಾಣ ಮಂಟಪ್ಪ, ವಸತಿ ಗೃಹಗಳು ಮತ್ತು ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಹಾಸ್ಟೆಲ್ ಸೌಲಭ್ಯ ಬೇಕಾಗಿದೆ. ಹಾಗಾಗಿ ಸಮಾಜದ ಜನರು ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರ ಈ ಸೌಲಭ್ಯಗಳನ್ನು ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.