ಕರ್ನಾಟಕ

karnataka

ETV Bharat / state

’ಹೆಣ್ಮಕ್ಕಳಿಗೆ ಸಮಾನ ಅವಕಾಶ ಕಲ್ಪಿಸುವಲ್ಲಿ ಅಂಬೇಡ್ಕರ್ ಪಾತ್ರ ಮುಖ್ಯವಾದದ್ದು’: ಬಿ. ವಿಜಯ ಕುಮಾರ್ - Equal opportunity for girls in education

ಮಹಿಳೆಯರು ಮನೆಯನ್ನು ಬಿಟ್ಟು ಸಮಾಜದ ಮುನ್ನೆಲೆಗೆ ಬರಬೇಕಾದರೆ ಶಿಕ್ಷಣ ತುಂಬಾ ಮುಖ್ಯ. ಶಿಕ್ಷಣದಿಂದ ಮಾತ್ರ ಮಹಿಳೆಯ ಅಭಿವೃದ್ಧಿ ಸಾಧ್ಯ ಎಂದು ತಿಳಿದಿದ್ದ ಅಂಬೇಡ್ಕರ್ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು. ಇದರ ಫಲವಾಗಿ ಇಂದು ಹಲವಾರು ಜನ ಹೆಣ್ಣು ಮಕ್ಕಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರದ ವಿಭಾಗದ ಮುಖ್ಯಸ್ಥ ಬಿ. ವಿಜಯ ಕುಮಾರ್ ಅವರು ಹೇಳಿದ್ದಾರೆ.

ಡಾ. ಅಂಬೇಡ್ಕರ್ ಓದು ವಿಶೇಷ ಕಾರ್ಯಕ್ರಮ
ಡಾ. ಅಂಬೇಡ್ಕರ್ ಓದು ವಿಶೇಷ ಕಾರ್ಯಕ್ರಮ

By

Published : Feb 15, 2021, 7:44 PM IST

ಬಳ್ಳಾರಿ: ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದಂತಹ ಮಹಿಳೆಯರನ್ನು ಸಮಾಜಕ್ಕೆ ಪರಿಚಯಿಸುವ ಮೂಲಕ ಸ್ತ್ರೀಯರಿಗೆ ಸಮಾನವಾದ ಅವಕಾಶಗಳನ್ನು ನೀಡುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪಾತ್ರ ಅತ್ಯಂತ ಪ್ರಮುಖವಾದದ್ದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರದ ವಿಭಾಗದ ಮುಖ್ಯಸ್ಥ ಬಿ. ವಿಜಯ ಕುಮಾರ್ ಅವರು ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ನಗರದ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ವಿದ್ಯಾಲಯದ ಆವರಣದಲ್ಲಿ, ಸೋಮವಾರ ಹಮ್ಮಿಕೊಂಡಿದ್ದ ಡಾ. ಅಂಬೇಡ್ಕರ್ ಓದು ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡಾ. ಅಂಬೇಡ್ಕರ್ ಓದು ವಿಶೇಷ ಕಾರ್ಯಕ್ರಮ

ಮಹಿಳೆಯರು ಮನೆಯನ್ನು ಬಿಟ್ಟು ಸಮಾಜದ ಮುನ್ನೆಲೆಗೆ ಬರಬೇಕಾದರೆ ಶಿಕ್ಷಣ ತುಂಬಾ ಮುಖ್ಯ. ಶಿಕ್ಷಣದಿಂದ ಮಾತ್ರ ಮಹಿಳೆಯ ಅಭಿವೃದ್ಧಿ ಸಾಧ್ಯವೆಂದು ತಿಳಿದಿದ್ದ ಅಂಬೇಡ್ಕರ್ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು. ಇದರ ಫಲವಾಗಿ ಇಂದು ಹಲವಾರು ಜನ ಹೆಣ್ಣು ಮಕ್ಕಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ ಎಂದರು.

ಇಂದಿನ ಹೆಣ್ಣು ಮಕ್ಕಳು ಡಾ. ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ಲಭಿಸಿದ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ನಿಮ್ಮ ನಿಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಳ್ಳುವ ಮೂಲಕ ಉತ್ತಮ ನಾಗರಿಕರಾಗಿ ಸಮಾಜದ ಬೆಳವಣಿಗೆಗೆ ಸಹಕರಿಸಿ ಎಂದು ತಿಳಿಸಿದರು.

ಓದಿ: ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿಗೆ ಆರ್ಯವೈಶ್ಯ ಸಮಾಜದಿಂದ ಸನ್ಮಾನ

ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್.ವೈ. ತಿಮ್ಮಾರೆಡ್ಡಿ ಅವರು ಮಾತನಾಡಿ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಬೆಳೆದ ರೀತಿ, ಅವರ ಜೀವನ ವಿಧಾನ, ಅವರು ಅನುಭವಿಸಿದ ಕಷ್ಟ, ಎಲ್ಲವನ್ನು ಮೆಟ್ಟಿನಿಂತು ಭಾರತ ರತ್ನ ಪ್ರಶಸ್ತಿಯನ್ನು ಪಡೆಯುವವರೆಗೂ ಅವರು ನಡೆದ ಬಂದ ಹಾದಿ ಇಂದಿನ ಯುವ ಜನತೆಗೆ ಮಾದರಿ. ಅವರು ರೂಪಿಸಿದ ಸಂವಿಧಾನವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಹೋಗುವ ಕೆಲಸ ನಮ್ಮಿಂದ ಆಗಬೇಕಿದೆ ಎಂದು ಹೇಳಿದರು.

ABOUT THE AUTHOR

...view details