ವಿಜಯನಗರ :ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಗ್ರಾಮದಲ್ಲಿನ ಅರಣ್ಯ ಪ್ರದೇಶದ 10 ರಿಂದ 15 ಎಕರೆಯಲ್ಲಿ ಬೆಳೆದಿದ್ದ ಹುಲ್ಲು ಹಾಗೂ 100 ರಿಂದ 150 ಗಿಡಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ ಎಂದು ಅಗ್ನಿ ಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ.
ಕಿಡಿಗೇಡಿಗಳಿಂದ ಅರಣ್ಯಕ್ಕೆ ಬೆಂಕಿ ಆರೋಪ : 15 ಎಕರೆಯಷ್ಟು ಹುಲ್ಲುಗಾವಲು ಪ್ರದೇಶ ಭಸ್ಮ - Hagaribommanahalli forest destroyed by fire
ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿಹಚ್ಚಿರುವ ಪರಿಣಾಮ ಸುಮಾರು 10 ರಿಂದ 15 ಎಕರೆ ಪ್ರದೇಶದಲ್ಲಿದ್ದ ಹುಲ್ಲು ನಾಶವಾಗಿದೆ ಎಂದು ಅಗ್ನಿ ಶಾಮಕದಳದ ಸಿಬ್ಬಂದಿ ಆರೋಪಿಸಿದ್ದಾರೆ..
![ಕಿಡಿಗೇಡಿಗಳಿಂದ ಅರಣ್ಯಕ್ಕೆ ಬೆಂಕಿ ಆರೋಪ : 15 ಎಕರೆಯಷ್ಟು ಹುಲ್ಲುಗಾವಲು ಪ್ರದೇಶ ಭಸ್ಮ Hagaribommanahalli forest burns by fire](https://etvbharatimages.akamaized.net/etvbharat/prod-images/768-512-11006717-103-11006717-1615734793972.jpg)
ಅರಣ್ಯ ಪ್ರದೇಶದಲ್ಲಿನ 15 ಎಕರೆ ಹುಲ್ಲು, ಗಿಡಗಳಿಗೆ ಬೆಂಕಿ
ಓದಿ:ರಾಜ್ಯದಲ್ಲಿಂದು 934 ಮಂದಿಗೆ ಸೋಂಕು: ಮೂವರು ಕೋವಿಡ್ಗೆ ಬಲಿ
ಯಾರೋ ಕಿಡಿಗೇಡಿಗಳು ಹುಲ್ಲಿಗೆ ಬೆಂಕಿಹಚ್ಚಿದ ಪರಿಣಾಮ ಈ ರೀತಿಯಾಗಿ ಹುಲ್ಲು, ಗಿಡಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ ಎಂದು ಸಿಬ್ಬಂದಿ ತಿಳಿಸಿದ್ದಾರೆ. ವಿಷಯ ತಿಳಿದು ಅರಣ್ಯ ಇಲಾಖೆಯ ಅಧಿಕಾರಿ ವಿಜಯ್ ಕುಮಾರ್ ಮತ್ತು ಅಗ್ನಿ ಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.