ಕರ್ನಾಟಕ

karnataka

By

Published : May 11, 2019, 3:40 PM IST

ETV Bharat / state

ಹಂಪಿ ಕನ್ನಡ ವಿವಿ ಹಾಸ್ಟೆಲ್‌ಗಳಲ್ಲಿ ಇಲ್ಲ ಮೂಲಸೌಕರ್ಯ.. ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂಲಸೌಕರ್ಯಕ್ಕಾಗಿ ವಸತಿ ನಿಲಯಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ವಿವಿಧ ಬೇಡಿಕೆ ಸಲ್ಲಿಸಿದ್ದಾರೆ.

ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ಹಂಪಿ ಕನ್ನಡ ವಿವಿ ವಸತಿ ನಿಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬಳ್ಳಾರಿ:ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಿಗೆ ಅಗತ್ಯ ಮೂಲಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಮೂಲಸೌಕರ್ಯಕ್ಕೆ ಒತ್ತಾಯಿಸಿ ವಸತಿ ನಿಲಯಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಇದೇ ವೇಳೆ ವಸತಿ ನಿಲಯಕ್ಕೆ ಭೇಟಿ ನೀಡಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸುರೇಶ್ ಬಾಬು, ಏಪ್ರಿಲ್ 6 ರಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಊಟ ಮಾಡಿದ್ದ 40 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು ಎಂದು ಮಾಹಿತಿ ಬಂದಿತ್ತು. 7ನೇ ತಾರೀಖು ಭೇಟಿ ನೀಡಿದ್ದೆ. ಊಟವನ್ನು ಪರೀಕ್ಷೆಗೆ ಕಳಿಸಿದ್ದೇವೆ, ವರದಿ ಬಂದ ನಂತರ ಮಾಹಿತಿ ನೀಡುವ ಭರವಸೆ ನೀಡಿದ್ದಾರೆ. ಅಲ್ಲದೆ ಈ ಸಂಬಂಧ ಇಬ್ಬರನ್ನ ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳ ಬೇಡಿಕೆ :
ಖಾಯಂ ನಿಲಯ ಪಾಲಕರನ್ನು ನೇಮಕ ಮಾಡಬೇಕು. ಅಡುಗೆ ಸಿಬ್ಬಂದಿ ಬದಲಾವಣೆ ಮಾಡಬೇಕು ಮತ್ತು ಅಡುಗೆ ಸಿಬ್ಬಂದಿ ಹಾಗೂ ನಿಲಯ ಪಾಲಕರ ಮೇಲೆ ತನಿಖೆಯಾಗಬೇಕು. ಜೊತೆಯಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ನೀಡಬೇಕೆಂದು ಮನವಿ ಪತ್ರ ಸಲ್ಲಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details