ಬಳ್ಳಾರಿ: ನಗರದ ರೇಡಿಯೋ ಪಾರ್ಕ್ ಸುತ್ತಮುತ್ತಲಿನ ಪ್ರದೇಶದಲ್ಲಿ ತಡರಾತ್ರಿ ಸುರಿದ ಮಳೆಗೆ ತರಕಾರಿ ಮಾರುಕಟ್ಟೆ ಕೆಸರು ಗದ್ದೆಯಂತಾಗಿದೆ.
ತಡರಾತ್ರಿ ಸುರಿದ ಮಳೆಗೆ ಕೆಸರುಗದ್ದೆಯಂತಾದ ತರಕಾರಿ ಮಾರುಕಟ್ಟೆ
ಬಳ್ಳಾರಿ: ನಗರದ ರೇಡಿಯೋ ಪಾರ್ಕ್ ಸುತ್ತಮುತ್ತಲಿನ ಪ್ರದೇಶದಲ್ಲಿ ತಡರಾತ್ರಿ ಸುರಿದ ಮಳೆಗೆ ತರಕಾರಿ ಮಾರುಕಟ್ಟೆ ಕೆಸರು ಗದ್ದೆಯಂತಾಗಿದೆ.
ಮಳೆಯಿಂದಾಗಿ ಬಳ್ಳಾರಿ ಗ್ರಾಮಾಂತರ ಪ್ರದೇಶದ ರೇಡಿಯೋ ಪಾರ್ಕ್,ಸುಧಾಕ್ರಾಸ್, ಕೌಲ್ ಬಜಾರ್ನಂತಹ ತಗ್ಗು ಪ್ರದೇಶದಲ್ಲಿ ನೀರು ನಿಂತಿದೆ.
ಇನ್ನು, ಮಳೆಯಿಂದಾಗಿ ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿರುವ ತರಕಾರಿ ಮಾರುಕಟ್ಟೆ ಕೆಸರು ಗದ್ದೆಯಂತಾಗಿದ್ದು, ವ್ಯಾಪಾರಸ್ಥರು, ಗ್ರಾಹಕರು ಪರದಾಡಿದರು.