ಹೊಸಪೇಟೆ (ವಿಜಯನಗರ) :ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಅಭಿನವ ಹಾಲ ಶ್ರೀಗಳಿಗೆ ಕೊಲೆ ಬೆದರಿಕೆ ಬಂದಿದೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನಾಮಧೇಯ ವ್ಯಕ್ತಿಯಿಂದ ಕೊಲೆ ಹಾಗೂ ತೇಜೋವಧೆ ಕರೆ ಬಂದಿದೆ. ಸೆಪ್ಟೆಂಬರ್ 29ರಂದು ಸಂಜೆ ವೇಳೆ ಅನಾಮಿಕರೊಬ್ಬರು ಕರೆ ಮಾಡಿದ್ದಾರೆ. ಹಿಂದುತ್ವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು, ರಾಷ್ಟ್ರೀಯತೆಯ ಬಗ್ಗೆ ಮಾತನಾಡಿದರೆ ಕೊಲೆ ಮಾಡುವುದಾಗಿ ಶ್ರೀಗಳಿಗೆ ಬೆದರಿಕೆ ಹಾಕಲಾಗಿದೆ. ಇದೇ ಸಂದರ್ಭದಲ್ಲಿ ಕಠೋರವಾದ ಪದಗಳಿಂದ ನಿಂದನೆ ಮಾಡಲಾಗಿದೆ.