ಹೊಸಪೇಟೆ (ವಿಜಯನಗರ): ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹರಿಸಿದ್ದರಿಂದ, ಬಳ್ಳಾರಿಯ ಕಂಪ್ಲಿ ಸೇತುವೆ ನದಿಪಾತ್ರದ 52 ಕುಟುಂಬಗಳ 250 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಈ ಬಗ್ಗೆ ಕಂಪ್ಲಿ ತಹಶೀಲ್ದಾರ್ ಗೌಸಿಯಾ ಬೇಗಂ ಮಾತನಾಡಿ, ಹಳೆ ಸೇತುವೆಯಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ನದಿಪಾತ್ರದ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಈಗಾಗಲೇ ಸಂಚಾರವನ್ನು ನಿಷೇಧಿಸಲಾಗಿದೆ. ಸೇತುವೆ ಮುಳಗಡೆಯಾಗಿದ್ದರಿಂದ ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತಗೊಂಡಿದ್ದು, ಬುಕ್ಕಸಾಗರ ಸೇತುವೆಯಿಂದ ವಾಹನಗಳು ಓಡುತ್ತಿವೆ ಎಂದು ಹೇಳಿದರು.