ಕರ್ನಾಟಕ

karnataka

ETV Bharat / state

ಬೈಕ್​ಗೆ ಲಾರಿ ಡಿಕ್ಕಿ: ಎರಡು ಹೋಳಾದ ಬೈಕ್​​ ಸವಾರನ ಮುಖ!

ಬೈಕ್​ಗೆ ಅದಿರು ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರನ ಮುಖ ಎರಡು ಹೋಳಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಕುರುಗೋಡಿನಲ್ಲಿ ನಡೆದಿದೆ.

By

Published : Sep 26, 2019, 7:29 AM IST

ಎರಡು ಹೋಳಾದ ಬೈಕ್ ಸವಾರನ ಮುಖ

ಬಳ್ಳಾರಿ:ಜಿಲ್ಲೆಯ ಕುಡಿತಿನಿ ವ್ಯಾಪ್ತಿಯ ವೇಣಿ ವೀರಾಪುರ ಬಳಿ ನಿನ್ನೆ ಬೈಕ್​ಗೆ ಅದಿರು ಸಾಗಣೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರನ ಮುಖವೇ ಎರಡು ಹೋಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕುರುಗೋಡು ತಾಲೂಕಿನ ವೇಣಿವೀರಾಪುರ ಗ್ರಾಮದ ಪ್ರವೇಶ ದ್ವಾರದ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಗ್ರಾಮದ ನಿವಾಸಿ ರವಿಕುಮಾರ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಲಾರಿ ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಲ್ಲದೆ ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಕೂಡ ಅತಿ ವೇಗವಾಗಿ ಬೈಕ್ ಚಲಾಯಿಸುತ್ತಿರುವುದು ಸಾಮಾನ್ಯವಾಗಿಬಿಟ್ಟಿದೆ.‌ ಹೀಗಾಗಿ ರವಿಕುಮಾರ ಸಹ ಆತನ ಸಹಚರನೊಂದಿಗೆ ವೇಗವಾಗಿ ಬೈಕ್​ ಚಲಾಯಿಸಿಕೊಂಡು ಬಂದಿರಬಹುದೆಂಬ ಸಂಶಯವೂ ಇಲ್ಲಿನ ಜನರಲ್ಲಿದೆ.‌

ಎರಡು ಹೋಳಾದ ಬೈಕ್ ಸವಾರನ ಮುಖ

ಗ್ರಾಮದ ಪ್ರದೇಶ ದ್ವಾರದ ಬಳಿ ಚತುಷ್ಪಥ ರಸ್ತೆ ಕಾಮಗಾರಿ ಅಪೂರ್ಣಗೊಂಡಿದ್ದರ ಪರಿಣಾಮ ಏಕಮುಖ ರಸ್ತೆಯಲ್ಲೇ ಭಾರಿ, ಲಘು ಹಾಗೂ ದ್ವಿಚಕ್ರ ವಾಹನಗಳು ಸಂಚರಿಸುವ ಪರಿಸ್ಥಿತಿಯಿದೆ.

ಗ್ರಾಮಸ್ಥರ ಅಕ್ರೋಶ...

ಬೈಕ್ ಸವಾರನ ಸಾವಿಗೆ ಕಾರಣವಾದ ಲಾರಿ ಚಾಲಕನ ವಿರುದ್ಧ ವೇಣಿ ವೀರಾಪುರ ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬೈಕ್​ಗೆ ಡಿಕ್ಕಿ ಹೊಡೆದು ಪರಾರಿಯಾದ ಚಾಲಕನನ್ನು ಕೂಡಲೇ ಬಂಧಿಸಬೇಕು.‌ ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಕೆಲಕಾಲ ರಸ್ತೆ ತಡೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕುಡಿತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details