ಕರ್ನಾಟಕ

karnataka

ETV Bharat / state

ಅಂತರ್ಜಾತಿ ವಿವಾಹಕ್ಕೆ ಒಪ್ಪದ ಪೋಷಕರು, ದುಡುಕಿದ ಪ್ರೇಮಿಗಳು... ಹೂವಿನ ಹಡಗಲಿಯಲ್ಲಿ ದುರಂತ - ಪ್ರೇಮಿಗಳು ಆತ್ಮಹತ್ಯೆ

ಅಂತರ್ಜಾತಿ ವಿವಾಹಕ್ಕೆ ಮನೆಯಲ್ಲಿ ಒಪ್ಪದ ಹಿನ್ನೆಲೆ ಪ್ರೇಮಿಗಳು ದುಡುಕಿನ ನಿರ್ಧಾರ ಕೈಗೊಂಡು ಬಾರದ ಲೋಕಕ್ಕೆ ತೆರಳಿದ್ದಾರೆ. ಮನೆಯಲ್ಲಿ ತಮ್ಮ ಮದುವೆಗೆ ಒಪ್ಪದ್ದಕ್ಕೆ ಯುವಜೋಡಿಯೊಂದು ನೇಣಿಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

Lovers commit suicide
ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

By

Published : Feb 27, 2020, 4:38 PM IST

Updated : Feb 27, 2020, 4:50 PM IST

ಬಳ್ಳಾರಿ:ಜಿಲ್ಲೆಯಲ್ಲಿ ದುರಂತವೊಂದು ನಡೆದಿದೆ. ಅಂತರ್ಜಾತಿ ಪ್ರೇಮ ವಿವಾಹಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಗುಂದಿ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿಂಗಮ್ಮ(26) ಹಾಗೂ ಗುರುರಾಜ (30) ಮೃತ ಪ್ರೇಮಿಗಳು. ನಿಂಗಮ್ಮ ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನ ಗ್ರಾಮದವರಾಗಿದ್ದು, ಗುರುರಾಜ ಹೂವಿನಹಡಗಲಿ ತಾಲೂಕಿನ ಚಿಲುಗೋಡ್ ಗ್ರಾಮದವನು. ಇಬ್ಬರ ಮಧ್ಯೆ ಕಾಲೇಜಿನಲ್ಲಿ ಓದುವ ಸಮಯದಲ್ಲಿ ಪರಸ್ಪರ ಪರಿಚಯವಾಗಿ, ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇಬ್ಬರ ಜಾತಿ ಬೇರೆ ಬೇರೆ ಎಂಬ ಕಾರಣಕ್ಕೆ ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗ್ತಿದೆ.

ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

ಪೋಷಕರ ವಿರೋಧದಿಂದ ಮನನೊಂದ ಪ್ರೇಮಿಗಳು, ಬುಧವಾರ ಮನೆಬಿಟ್ಟು ಹೋಗಿ ಹೊಳಗುಂದಿ ಗ್ರಾಮದ ಹೊರವಲಯದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಂದು ಬೆಳಗಿನ ಜಾವ ಕುರಿಗಾಹಿಯೊಬ್ಬರು ಮೃತದೇಹಗಳನ್ನು ನೋಡಿದ್ದು, ಬಳಿಕ ಹೂವಿನಹಡಗಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಸಿಕೊಂಡಿದ್ದಾರೆ.

Last Updated : Feb 27, 2020, 4:50 PM IST

ABOUT THE AUTHOR

...view details