ಕರ್ನಾಟಕ

karnataka

By

Published : May 5, 2020, 11:34 AM IST

ETV Bharat / state

ನೀರು ತರಲು ಹೋದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ನೀರು ತರಲು ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ವ್ಯಕ್ತಿ ಕೆಳಗೆ ಬಿದ್ದು ಸಾವಿಗೀಡಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

accident
accident

ಬಳ್ಳಾರಿ: ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಹನುಮಾನ್​ ಗೋಡಾನ್​ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವಿಗೀಡಾಗಿದ್ದಾರೆ.

ಲಾರಿ ಹಾಗೂ ಬೈಕ್ ಡಿಕ್ಕಿ

ಮೋಟಾರ್ ಸೈಕಲ್ ಹಿಂದೆ ಕುಳಿತುಕೊಂಡು ತಮ್ಮ ಹೋಟೆಲ್ ಕಡೆಯಿಂದ ನೀರು ತರಲು ಹೋಗುತ್ತಿದ್ದಾಗ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದು ಬೈಕ್​ನಲ್ಲಿದ್ದ ಇಬ್ಬರು ಕೆಳಗೆ ಬಿದ್ದಿದ್ದು ಮಹಮ್ಮದ್ ರಫೀಕ್ (50) ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಲಾರಿ ಹಾಗೂ ಬೈಕ್ ಡಿಕ್ಕಿ

ಬೈಕ್ ಚಾಲನೆ ಮಾಡುತ್ತಿದ್ದ ಹೈದರ್ ಕಾಲುಗಳಿಗೆ, ತಲೆ ಹಾಗೂ ಹಣೆಗೆ ಗಾಯಗಳಾಗಿವೆ. ಹೈದರ್ ವಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ತಿಳಿಸಿದ್ದಾರೆ. ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details