ಕರ್ನಾಟಕ

karnataka

By

Published : Oct 21, 2020, 7:37 PM IST

ETV Bharat / state

ಬಳ್ಳಾರಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಿದ ಮಾಸ್ಟರ್ ಟ್ರೈನರ್ ಪನಮೇಶಲು

ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ ಅವರು ಚುನಾವಣೆಗೆ ನಿಯೋಜಿತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಾರ್ಯನಿರ್ವಹಿಸುವ ಬಗ್ಗೆ ಹಾಗೂ ಕೋವಿಡ್ ನಿಯಮಗಳ ಕುರಿತು ವಿವರಿಸಿದರು..

Master Trainer Panameshalu gave Training programe for election Booth Officers
ಬಳ್ಳಾರಿ ಮತಗಟ್ಟೆ ಅಧಿಕಾರಿಗಳಿಗೆ ಮಾಸ್ಟರ್ ಟ್ರೈನರ್ ಪನಮೇಶಲುವಿನಿಂದ ತರಬೇತಿ

ಬಳ್ಳಾರಿ :ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪಿಆರ್‌ಒ, ಎಪಿಆರ್‌ಒ ಮತ್ತು ಪಿಒಗಳಿಗೆ ಎರಡನೇ ಹಂತದ ತರಬೇತಿ ಕಾರ್ಯಕ್ರಮ ನಗರದ ಬಿಡಿಎಎ ಫುಟ್ಬಾಲ್ ಸಭಾಂಗಣದಲ್ಲಿಂದು ನಡೆಯಿತು.

ಮಾಸ್ಟರ್ ಟ್ರೈನರ್ ಪನಮೇಶಲು ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಿದರು. ಮತದಾನದ ಅಂತಿಮ ಒಂದು ಗಂಟೆಯಲ್ಲಿ ಕೊರೊನಾ ಸೋಂಕಿತರಿಗೆ ಮತದಾನ ಮಾಡಲು ಚುನಾವಣಾ ಆಯೋಗವು ಅವಕಾಶ ಕಲ್ಪಿಸಿರುವ ಹಿನ್ನೆಲೆ ಚುನಾವಣೆಗೆ ನಿಯೋಜಿತರಾದ ಅಧಿಕಾರಿಗಳು ಪಿಪಿಒ ಕಿಟ್ ಧರಿಸುವಿಕೆ ಮತ್ತು ಕೋವಿಡ್ ನಿಯಮಗಳನ್ನು ಪಾಲಿಸುವುದಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಸಿಬ್ಬಂದಿ ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಟ್ಟರು.

ಟ್ರೈನರ್ ಪನಮೇಶಲುವಿನಿಂದ ತರಬೇತಿ

2 ಹೆಚ್ಚುವರಿ ಮತಕೇಂದ್ರಗಳು ಸೇರಿದಂತೆ ಒಟ್ಟು 28 ಮತಕೇಂದ್ರಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ 6,753 ಮತದಾರರಿದ್ದು, ಇದೇ ಅ. 28ರಂದು ಬೆಳಗ್ಗೆ 8 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ ಅವರು ಚುನಾವಣೆಗೆ ನಿಯೋಜಿತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಾರ್ಯನಿರ್ವಹಿಸುವ ಬಗ್ಗೆ ಹಾಗೂ ಕೋವಿಡ್ ನಿಯಮಗಳ ಕುರಿತು ವಿವರಿಸಿದರು.

ABOUT THE AUTHOR

...view details