ಹೊಸಪೇಟೆ: ನಗರದ ಹುಡಾ ಕಚೇರಿಯ ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರದಲ್ಲಿಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಅವರ ನೇತೃತ್ವದಲ್ಲಿ ಜಿಲ್ಲಾ ಖನಿಜ ನಿಧಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಪ್ರವಾಸೋದ್ಯಮ ಉತ್ತೇಜನಕ್ಕಾಗಿ ನಗರದಲ್ಲಿ ಗಾಜಿನ ಮನೆ ನಿರ್ಮಿಸಬೇಕು. ಇದೊಂದು ಪ್ರವಾಸಿ ತಾಣವಾಗಬೇಕು. ತೋಟಗಾರಿಕೆ ಇಲಾಖೆ ಅವರು ಸ್ಥಳ ಪರಿಶೀಲನೆ ನಡೆಸಿ,ರೂಪುರೇಷೆಗಳನ್ನು ಸಿದ್ಧಪಡಿಸಬೇಕು. ಅಲ್ಲದೇ, ಉದ್ಯಾನವನ ನಿರ್ಮಾಣಕ್ಕೂ ತಯಾರಿ ನಡೆಸಬೇಕು ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಎಂದರು. ಗಾಜಿನ ಮನೆ ಮೂಲಕ ನಗರವನ್ನು ಪ್ರವಾಸಿ ತಾಣವನ್ನಾಗಿ ಮಾಡಬೇಕು. ಪ್ರವಾಸಿಗರನ್ನು ಸೆಳೆಯುವಂತ ವಾತಾವರಣವನ್ನು ನಿರ್ಮಿಸುವುದರಿಂದ ನಗರಕ್ಕೆ ಮತ್ತಷ್ಟು ಮೆರಗು ಬರಲಿ ಎಂದರು.