ಕರ್ನಾಟಕ

karnataka

By

Published : Feb 24, 2021, 5:56 AM IST

ETV Bharat / state

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ... ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದ ಸಚಿವ ಸಿಂಗ್

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಸಿಂಗ್ ಹೇಳಿದರು.

Bellary district  incharge minister, Bellary district  incharge minister Change, Bellary district  incharge minister Change news, Minister Anand Singh, Minister Anand Singh news, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ ಸುದ್ದಿ, ಸಚಿವ ಆನಂದ ಸಿಂಗ್​, ಸಚಿವ ಆನಂದ ಸಿಂಗ್​ ಸುದ್ದಿ,
ತ್ರೈಮಾಸಿಕ ಕೆಡಿಪಿ ಸಭೆ

ಬಳ್ಳಾರಿ : ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ನನ್ನ ಬದಲಾವಣೆ ಮಾಡುವುದು ಮುಖ್ಯಮಂತ್ರಿಗಳ ವಿವೇಚನಗೆ ಬಿಟ್ಟಿದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹೇಳಿದರು.

ತ್ರೈಮಾಸಿಕ ಕೆಡಿಪಿ ಸಭೆ

ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿಯಿಂದ ಬದಲಾಯಿಸಿ ಸಮಾಜಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ನೀಡಿದರೆ ಸ್ವತಃ ನಾನೇ ಸ್ವಾಗತಿಸುತ್ತೇನೆ. ಒಂದು ವೇಳೆ ಅವರು ಮತ್ತು ನನ್ನನ್ನು ಬಿಟ್ಟು ಬೇರೆಯವರನ್ನು ನಿಯೋಜಿಸದರೇ ಮುಖ್ಯಮಂತ್ರಿಗಳ ಬಳಿ ವಿಚಾರಿಸುತ್ತೇನೆ ಎಂದರು.

ತ್ರೈಮಾಸಿಕ ಕೆಡಿಪಿ ಸಭೆ

ಶಾಸಕ ಸೋಮಶೇಖರ್​ ರೆಡ್ಡಿಗೆ ಸಚಿವ ಸ್ಥಾನ ನೀಡಿ ಜಿಲ್ಲಾ ಉಸ್ತುವಾರಿ ನೀಡಿದ್ರೂ ನನ್ನ ಅಭ್ಯಂತರವೇನಿಲ್ಲ ಎಂದರು.

ಹೊಸಪೇಟೆ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ 4 ವರ್ಷಗಳಿಂದ ನಿಧಾನಗತಿಯಲ್ಲಿ ಸಾಗಿದ್ದು, ಇತ್ತೀಚೆಗೆ ನಡೆದ ಸಭೆಯಲ್ಲಿ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರೊಂದಿಗೆ ಚರ್ಚಿಸಲಾಗಿತ್ತು. ಈ ವೇಳೆ ಅವರು ಮುಂದಿನ ಮಾರ್ಚ್‍ವೊಳಗೆ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ ಎಂದರು.

ತ್ರೈಮಾಸಿಕ ಕೆಡಿಪಿ ಸಭೆ

ಸರಕಾರವು ಆಡಳಿತಾತ್ಮಕ ಕಾರಣಕ್ಕಾಗಿ ಜಿಲ್ಲೆಯನ್ನು ವಿಭಜಿಸಿ ಅಧಿಸೂಚನೆ ಹೊರಡಿಸಿ ಈ ನಿರ್ಧಾರ ಕೈಗೊಂಡಿದೆ. ನ್ಯಾಯಾಲಯದ ಎಕ್ಸೆಪ್ಟ್ ಮಾಡುವುದಿಲ್ಲ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಸದ ದೇವೇಂದ್ರಪ್ಪ, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಪಂ ಸಿಇಒ ಕೆ.ಆರ್ ನಂದಿನಿ ಮತ್ತಿತರರು ಇದ್ದರು.

ABOUT THE AUTHOR

...view details