ಬಳ್ಳಾರಿ :ಭಗೀರಥ ಜಯಂತಿ ಆಚರಣೆ ವೇಳೆ ಸಚಿವ ಶ್ರೀರಾಮುಲು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ನಗರದ ಮುನಿಸಿಪಲ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶ್ರೀ ಭಗೀರಥ ಜಯಂತ್ಯುತ್ಸವ ಅಂಗವಾಗಿ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಲು ಬಂದಿದ್ದ ಸಚಿವ ಶ್ರೀರಾಮುಲು, ಕಳೆಗುಂದಿದ ಫೋಟೋ ಹಾಗೂ ಜಯಂತಿಗೆ ಜನರನ್ನು ಸೇರಿಸಿಲ್ಲ ಎಂದು ಕೊರಳಿಗೆ ಹಾಕಿದ್ದ ಹೂವಿನ ಹಾರ ಎಸೆದು ಅಧಿಕಾರಿಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡರು. ಎಡಿಸಿ ಮಂಜುನಾಥ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗಪ್ಪ ರಂಗಣ್ಣನವರ್ಗೆ ಶ್ರೀರಾಮುಲು ಕ್ಲಾಸ್ ತೆಗೆದುಕೊಂಡರು.