ಬಳ್ಳಾರಿ: ಶಾಸಕ ಎಂ ಪಿ ರೇಣುಕಾಚಾರ್ಯ ಹೇಳಿದ್ದೆಲ್ಲ ಕೇಂದ್ರ ಬಿಜೆಪಿ ನಾಯಕರ ಅಂತಿಮ ತೀರ್ಮಾನ ಅಲ್ಲ, ಅದು ಅವರ ವೈಯಕ್ತಿಕ ಅಭಿಪ್ರಾಯವಷ್ಟೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬಳ್ಳಾರಿಯ ಜಿಲ್ಲಾ ಪಂಚಾಯಿತಿ ಕಚೇರಿಯ ನಜೀರ್ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಈಶ್ವರಪ್ಪ ಮಾತನಾಡಿದ್ರು. ಸಿಎಂ ಬಿಎಸ್ ಯಡಿಯೂರಪ್ಪ ಪರ - ವಿರೋಧದ ಸಹಿ ಸಂಗ್ರಹ ಅಭಿಯಾನ ನಡೆದಿದೆ ಅಂತಾ ನಿಮಗೆ ಯಾರು ಹೇಳಿದ್ದು? ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ್ರು. ಮಾಧ್ಯಮದವರು ಶಾಸಕ ರೇಣುಕಾಚಾರ್ಯ ಎಂದಾಗ, ಅದೆಲ್ಲ ಶುದ್ಧ ಸುಳ್ಳು. ಅದು ಅವರ ವೈಯಕ್ತಿಕ ಅಭಿಪ್ರಾಯವಷ್ಟೇ ಎಂದ್ರು.