ಬಳ್ಳಾರಿ: ನಂಜನಗೂಡು ಟಿಎಚ್ಓ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಕುರಿತು ಆರೋಗ್ಯ ಸಚಿವ ಶ್ರೀ ರಾಮುಲು ಟ್ವೀಟ್ ಮಾಡಿದ್ದಾರೆ.
ವೈದ್ಯರ ಮುಷ್ಕರ ಕುರಿತು ಸಚಿವ ಶ್ರೀರಾಮುಲು ಹೇಳಿದ್ದೇನು..? - ಆರೋಗ್ಯ ಸಚಿವ ಶ್ರೀ ರಾಮುಲು ಟ್ವೀಟ್
ನಂಜನಗೂಡು ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಹಾಗೂ ಕೆಲವು ಬೇಡಿಕೆಗಳೊಂದಿಗೆ ಪ್ರತಿಭಟನೆಗೆ ಮುಂದಾಗಿದ್ದ ವೈದ್ಯಾಧಿಕಾರಿಗಳು ನನ್ನ ಭರವಸೆ ಮಾತಿಗೆ ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ರಾಮುಲು ಟ್ವೀಟ್ ಮಾಡಿದ್ಧಾರೆ.

ಶ್ರೀರಾಮುಲು
ನಂಜನಗೂಡು ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಹಾಗೂ ಕೆಲವು ಬೇಡಿಕೆಗಳೊಂದಿಗೆ ಪ್ರತಿಭಟನೆಗೆ ಮುಂದಾಗಿದ್ದ ವೈದ್ಯಾಧಿಕಾರಿಗಳು, ಸಿಎಂ ಅವರೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂಬ, ನನ್ನ ಭರವಸೆಗೆ ಬೆಲೆಕೊಟ್ಟು ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ತಿಳಿಸಿದ್ದಾರೆ.