ಕರ್ನಾಟಕ

karnataka

ಜೀವ ಬೆದರಿಕೆ ಪ್ರಕರಣ : ಆನಂದ್​ ಸಿಂಗ್​ ಸೇರಿ ನಾಲ್ವರ ವಿರುದ್ಧ ದೂರು ದಾಖಲು

By

Published : Aug 31, 2022, 7:08 AM IST

Updated : Aug 31, 2022, 1:59 PM IST

ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹಾಗೂ ಮೂವರ ವಿರುದ್ಧ ವಿಜಯನಗರ ಪೊಲೀಸ್​ ಠಾಣೆಯಲ್ಲಿ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ.

anand-singh
ಆನಂದ್​ ಸಿಂಗ್​

ವಿಜಯನಗರ: ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಬೆದರಿಕೆಗೆ ಕುಟುಂಬದಿಂದ ಸಾಮೂಹಿಕ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್ ಸಿಂಗ್ ಹಾಗೂ ಇತರ ಮೂವರ ವಿರುದ್ಧ ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಿನ್ನೆ ರಾತ್ರಿ ಪ್ರಕರಣ ದಾಖಲಾಗಿದೆ.

ಡಿ. ಪೋಲಪ್ಪ ಎಂಬುವರು ಕೊಟ್ಟ ದೂರಿನ ಮೇರೆಗೆ ಐಪಿಸಿ ಸೇಕ್ಷನ್ 504, 506 r/w 34 IPC, 3(2)(Va) SC/ST ಕಾಯ್ದೆ ಅಡಿ ಆನಂದ್ ಸಿಂಗ್, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

ಆನಂದ್​ ಸಿಂಗ್​ ಸೇರಿ ನಾಲ್ವರ ವಿರುದ್ಧ ದೂರು ದಾಖಲು

ಎಸ್ ಪಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನ : ಆನಂದ್ ಸಿಂಗ್ ಅವರು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಪೋಲಪ್ಪ ಅವರು ಕುಟುಂಬ ಸಮೇತ ಹೊಸಪೇಟೆಯ ಎಸ್ ಪಿ ಕಚೇರಿ ಎದುರು ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ , ಆತ್ಮಹತ್ಯೆಗೆ ಯತ್ನಿಸಿದವರನ್ನು ತಡೆದು ಆಸ್ಪತ್ರೆಗೆ ದಾಖಲು ಮಾಡಿ ವಿಚಾರಣೆ ನಡೆಸಿದರು.

ಇದನ್ನೂ ಓದಿ :ವಿಜಯನಗರ ಎಸ್​ಪಿ ಕಚೇರಿ ಮುಂದೆ ಕುಟುಂಬದಿಂದ ಆತ್ಮಹತ್ಯೆ ಯತ್ನ: ಸಚಿವರ ವಿರುದ್ಧ ಆರೋಪ!

Last Updated : Aug 31, 2022, 1:59 PM IST

ABOUT THE AUTHOR

...view details