ಕರ್ನಾಟಕ

karnataka

By

Published : Nov 20, 2020, 9:03 PM IST

ETV Bharat / state

ಬಳ್ಳಾರಿ ಜಿಲ್ಲೆ ವಿಭಜನೆಗೆ ವಿರೋಧ: ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯಿಂದ ಕ್ಯಾಂಡಲ್​ ಮಾರ್ಚ್​

ನಗರದ ಈಡಿಗ ಹಾಸ್ಟೆಲ್​​​ನಿಂದ ಗಡಗಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಸಮಿತಿಯ ಮುಖಂಡರಾದ ದರೂರು ಪುರುಷೋತ್ತಮಗೌಡ, ಕುಡತಿನಿ ಶ್ರೀನಿವಾಸ್, ಸಿದ್ಮಲ್ ಮಂಜುನಾಥ, ಜಾಲಿಹಾಳ್ ಶ್ರೀಧರ್ ಮೊದಲಾದವರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

Opposition to division of Bellary district news
ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯಿಂದ ಮುಂಬತ್ತಿ ಮೆರವಣಿಗೆ

ಬಳ್ಳಾರಿ:ಜಿಲ್ಲೆ ವಿಭಜನೆ ವಿರೋಧಿಸಿ ಇಂದು ಸಂಜೆ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ನಗರದಲ್ಲಿ ಕ್ಯಾಂಡಲ್​​ ಬೆಳಗಿಸಿ ಮೆರವಣಿಗೆ ನಡೆಸಿತು.

ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯಿಂದ ಕ್ಯಾಂಡಲ್​ ಮಾರ್ಚ್​

ನಗರದ ಈಡಿಗ ಹಾಸ್ಟೆಲ್​​ನಿಂದ ಗಡಗಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಸಮಿತಿಯ ಮುಖಂಡರಾದ ದರೂರು ಪುರುಷೋತ್ತಮಗೌಡ, ಕುಡತಿನಿ ಶ್ರೀನಿವಾಸ್, ಸಿದ್ಮಲ್ ಮಂಜುನಾಥ, ಜಾಲಿಹಾಳ್ ಶ್ರೀಧರ್ ಮೊದಲಾದವರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಜನರನ್ನು, ಎಲ್ಲಾ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸರ್ಕಾರ ಏಖಮುಖವಾಗಿ ನಿರ್ಧಾರ ತೆಗೆದುಕೊಂಡಿದೆ. ಸರ್ಕಾರ ತನ್ನ ನಿರ್ಧಾರ ಬದಲಿಸಬೇಕು. ಒಬ್ಬ ಆನಂದ್ ಸಿಂಗ್ ಅವರಿಗಾಗಿ‌ ವಿಜಯನಗರ ಜಿಲ್ಲೆ ರಚನೆ ಬೇಡ. ಅದರಲ್ಲಿ ಅವರ ಸ್ವಾರ್ಥ ಅಡಗಿದೆ, ಅದನ್ನು ಅರ್ಥಮಾಡಿಕೊಳ್ಳಬೇಕು. ಸರ್ಕಾರ ತನ್ನ ನಿರ್ಧಾರ ಬದಲಿಸದಿದ್ದರೆ ಬಳ್ಳಾರಿ ಬಂದ್ ಸೇರಿದಂತೆ ಉಗ್ರ ಸ್ವರೂಪದ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ABOUT THE AUTHOR

...view details