ಕರ್ನಾಟಕ

karnataka

ETV Bharat / state

ತುಂಬಿ ಹರಿದ ತುಂಗಭದ್ರೆ; ಕಂಪ್ಲಿ ಸೇತುವೆ ಜಲಾವೃತ - ತುಂಬಿ ಹರಿದ ತುಂಗಭದ್ರೆ

ಬಳ್ಳಾರಿ ಜಿಲ್ಲೆಯ ಜೀವನಾಡಿ ತುಂಗಭದ್ರಾ ಜಲಾಶಯದಿಂದ ನದಿಗೆ ಅಂದಾಜು 1.25 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಪರಿಣಾಮ ಕಂಪ್ಲಿ ಕೋಟೆ ಬಳಿಯ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ.

ಕಂಪ್ಲಿ ಸೇತುವೆ ಜಲಾವೃತ

By

Published : Aug 11, 2019, 1:28 PM IST

ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ ನದಿಗೆ ಅಂದಾಜು 1.25 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟ ಪರಿಣಾಮ ಕಂಪ್ಲಿ ಕೋಟೆ ಬಳಿಯ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ.

ಕಂಪ್ಲಿ- ಗಂಗಾವತಿ ನಡುವಿನ ಸಂಪರ್ಕ ಕೊಂಡಿಯಾಗಿರುವ ಈ ಸೇತುವೆಯಲ್ಲಿ ಈಗ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ತುಂಗಭದ್ರಾ ಜಲಾಶಯಕ್ಕೆ ತುಂಗಾ ಮತ್ತು ಭದ್ರ ಜಲಾಶಯದಿಂದ ಸರಿ ಸುಮಾರು 2 ಲಕ್ಷ ಕ್ಯೂಸೆಕ್​ಗೂ ಅಧಿಕ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ.

ಕಂಪ್ಲಿ ಸೇತುವೆ ಜಲಾವೃತ

ಹೀಗಾಗಿ ಈ ತುಂಗಭದ್ರಾ ನದಿ ಪಾತ್ರದ ಕೋಟೆ ಪ್ರದೇಶದ ವ್ಯಾಪ್ತಿಯ ಆಂಜನೇಯ ದೇಗುಲ ಹಾಗೂ ನದಿಪಾತ್ರದಲ್ಲಿನ ಮನೆಗಳಿಗೆ ನದಿ ನೀರು ನುಗ್ಗಿದೆ.‌ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ABOUT THE AUTHOR

...view details