ಬಳ್ಳಾರಿ :ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ಕುರಿತು ಜಿಲ್ಲೆಯ ನಾನಾ ತಾಲೂಕಿನಾದ್ಯಂತ ಇಂದಿನಿಂದ ಪ್ರವಾಸ ಕೈಗೊಳ್ಳಲು ಜಿಲ್ಲಾ ಹೋರಾಟ ಸಮಿತಿ ನಿರ್ಧರಿಸಿದೆ.
ಬಳ್ಳಾರಿಯ ಪೋಲಾ ಪ್ಯಾರಾಡೈಸ್ ಹೋಟೆಲ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಕುಡಿತಿನಿ ಶ್ರೀನಿವಾಸ ಮಾತನಾಡಿ, ಜಿಲ್ಲೆಯ ಕಂಪ್ಲಿ, ಸಂಡೂರು ಮತ್ತು ಸಿರುಗುಪ್ಪ ತಾಲೂಕಿನಲ್ಲಿ ಅಖಂಡ ಬಳ್ಳಾರಿ ಜಿಲ್ಲೆಯ ವಿಭಜನೆ ಕುರಿತು ಜನಜಾಗೃತಿ ಮೂಡಿಸುವ ಕಾರ್ಯವನ್ನು ಈ ದಿನದಿಂದಲೇ ಪ್ರಾರಂಭಿಸಲಾಗುವುದು ಎಂದರು.
ಒಂದೆಡೆ ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಹೋರಾಟವು ಕೇಂದ್ರ ಸ್ಥಾನದಲ್ಲಿ ನಡೆದ್ರೆ, ಮತ್ತೊಂದೆಡೆ ನಾನಾ ತಾಲೂಕಿನಲ್ಲಿ ಅಖಂಡ ಬಳ್ಳಾರಿ ಜಿಲ್ಲೆಯ ವಿಭಜನೆ ಕುರಿತು ಜನಜಾಗೃತಿ ಮೂಡಿಸಲಾಗುವುದು. ಆ ಬಳಿಕ ಎಲ್ಲಾ ಮಾಹಿತಿ ಸಂಗ್ರಹಿಸಿ ಕೋರ್ಟ್ ಮೊರೆ ಹೋಗಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.