ಕರ್ನಾಟಕ

karnataka

ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಬಳ್ಳಾರಿ ಜಿಲ್ಲಾ ಪತ್ರಕರ್ತರಿಂದ ಪ್ರತಿಭಟನೆ

By

Published : Aug 12, 2020, 2:06 PM IST

ಪತ್ರಕರ್ತರ ಮೇಲೆ ನಡೆದ ಹಲ್ಲೆ ಕುರಿತು ಸಮಗ್ರ ತನಿಖೆಯಾಗಬೇಕು. ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಬಳ್ಳಾರಿ ಜಿಲ್ಲಾ ಪತ್ರಕರ್ತರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Bellary
ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಬಳ್ಳಾರಿ ಜಿಲ್ಲಾ ಪತ್ರಕರ್ತರಿಂದ ಪ್ರತಿಭಟನೆ

ಬಳ್ಳಾರಿ: ಬೆಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಪತ್ರಕರ್ತರ ಮೇಲೆ ನಡೆದ ಹಲ್ಲೆ ಖಂಡಸಿ ಬಳ್ಳಾರಿ ಜಿಲ್ಲಾ ಪತ್ರಕರ್ತರಿಂದ ಪ್ರತಿಭಟನೆ ನಡೆಸಲಾಯಿತು.

ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಬಳ್ಳಾರಿ ಜಿಲ್ಲಾ ಪತ್ರಕರ್ತರಿಂದ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಳ್ಳಾರಿ ಪತ್ರಕರ್ತರು,‌ ಘಟನೆ ಕುರಿತು ಸಮಗ್ರ ತನಿಖೆಯಾಗಬೇಕು. ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರಜಾಪ್ರಭುತ್ವದ 4ನೇ ಅಂಗವನ್ನು ರಕ್ಷಿಸಬೇಕು. ಪ್ರತೀ ಬಾರಿ ಯಾವುದೇ ಘಟನೆ ನಡೆದರೂ ಪತ್ರಕರ್ತರ ಮೇಲೆ ಹಲ್ಲೆಯಾಗ್ತಿದೆ. ಇದಕ್ಕೆ ಇತಿಶ್ರೀ ಹಾಡುವ ಕಾನೂನು ತರಬೇಕೆಂದು ಒತ್ತಾಯಿಸಿದರು.

ABOUT THE AUTHOR

...view details