ಕರ್ನಾಟಕ

karnataka

ETV Bharat / state

ಲಾಕ್‌ಡೌನ್​ ನಡುವೆ ವಾರಕ್ಕೆ 2-3 ಕಲಾಪ: ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಆದೇಶಕ್ಕೆ ವಿರೋಧ - ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ

ಲಾಕ್‌ಡೌನ್​ ನಡುವೆ ವಾರದಲ್ಲಿ 2-3 ಕಲಾಪ ನಡೆಸುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

Public opposition to Consumer court order
ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಆದೇಶಕ್ಕೆ ವಿರೋ

By

Published : May 13, 2021, 8:24 AM IST

ಬಳ್ಳಾರಿ: ಮಹಾಮಾರಿ ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸಲು ಇಡೀ ರಾಜ್ಯವೇ ಹೆಣಗಾಡುತ್ತಿದೆ. ಇಂಥ ಕಠಿಣ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತನ್ನ ಅಧೀನದಲ್ಲಿ ಬರುವ ಜಿಲ್ಲಾ ಕಚೇರಿಗಳಿಗೆ ವಾರದಲ್ಲಿ 2-3 ಕಲಾಪ ನಡೆಸುವಂತೆ ಆದೇಶಿಸಿರುವುದಕ್ಕೆ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.

ವಾರದಲ್ಲಿ ಒಂದು ದಿನ ಕಲಾಪ ನಡೆಸುವುದು ಕಷ್ಟ ಸಾಧ್ಯವಾಗಿರುವ ಈ ಸಮಯದಲ್ಲಿ, 2-3 ಕಲಾಪಗಳನ್ನು ನಡೆಸುವುದಾದರೂ ಹೇಗೆ? ಇದೊಂದು ತರಾತುರಿಯ ತೀರ್ಮಾನ ಎಂದು ಗ್ರಾಹಕರು ಸೇರಿದಂತೆ ಆಯಾ ಜಿಲ್ಲೆಯ ಸದಸ್ಯರು, ನೌಕರರು ವಿರೋಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿದೆ. ಇಂಥ ಸಮಯದಲ್ಲಿ ಹೊರಗಡೆ ಬಂದರೆ ಪೊಲೀಸರು ಕಿರುಕುಳ ಕೊಡುತ್ತಾರೆ. ಜನಸಾಮಾನ್ಯರು ಬದುಕುವುದೇ ಕಷ್ಟವಾಗಿದೆ. ಈ ನಡುವೆ ಗ್ರಾಹಕರ ಆಯೋಗದ ಕಲಾಪಗಳಲ್ಲಿ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಹೇಗೆ? ಕಾರ್ಯ ಕಲಾಪಗಳಿಗೆ ಬಂದವರಿಗೆ ಸೋಂಕು ತಗುಲಿ ಮೃತಪಟ್ಟರೆ ಯಾರು ಹೊಣೆ? ಎಂದು ಪ್ರಶ್ನಿಸುತ್ತಿದ್ದಾರೆ. ರಾಜ್ಯದ 30 ಜಿಲ್ಲೆಗಳ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗಕ್ಕೆ ಮೇ‌.10 ರಂದು ಹೊರಡಿಸಿರುವ ಈ ಆದೇಶವನ್ನು ಕೂಡಲೇ ರದ್ದುಪಡಿಸಿ ಪರಿಷ್ಕೃತ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಆದೇಶ ಪ್ರತಿ

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಗ್ರಾಹಕರ ವ್ಯಾಜ್ಯಗಳಿಗೆ ತ್ವರಿತವಾಗಿ ಸ್ಪಂದಿಸುವುದಕ್ಕಾಗಿ ವಾರದಲ್ಲಿ 2-3 ಬಾರಿ ಅವಶ್ಯಕತೆಗೆ ಅನುಗುಣವಾಗಿ ಕಲಾಪ ನಡೆಸಲು ಆಯಾ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ನ್ಯಾಯಾಲಯಕ್ಕೆ ಆದೇಶಿಸಲಾಗಿದೆ. ಇದರಿಂದ ಗ್ರಾಹಕರಿಗೆ ಅನುಕೂಲವಾಗಲಿ ಎಂಬುವುದು ನಮ್ಮ ಉದ್ದೇಶ. ಕೊರೊನಾದಿಂದ ಆರ್ಥಿಕತೆ ಕುಸಿದಿದೆ, ಇಂಥಹ ಸಂದರ್ಭದಲ್ಲಿ ವ್ಯಾಜ್ಯಗಳು ಬಗೆಹರಿದರೆ ಗ್ರಾಹಕರಿಗೆ ಅನುಕೂಲವಾಗುತ್ತದೆ. ಹೀಗಾಗಿ, ಸೂಕ್ತ ಸಾಮಾಜಿಕ ಅಂತರ, ಕಡ್ಡಾಯ ಮಾಸ್ಕ್, ಸ್ಯಾನಿಟೈಸರ್ ಬಳಸಿ ಕಾರ್ಯ ಕಲಾಪ ನಡೆಸುವಂತೆ ಆದೇಶಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಕಾರ್ಯ ಕಲಾಪಕ್ಕೆ ಹೋಗುವುದು ಹೇಗೆ?ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲ. ಖಾಸಗಿ ವಾಹನಗಳೊಂದಿಗೆ ರಸ್ತೆಗಿಳಿದರೆ ಪೊಲೀಸರು ಕಿರುಕುಳ ನೀಡುತ್ತಾರೆ.ವಕೀಲರು, ಗ್ರಾಹಕರ ಆಯೋಗದ ಸದಸ್ಯರು ಸೂಕ್ತ ಕಾರಣಗಳನ್ನು ನೀಡಿ ಕಲಾಪಕ್ಕೆ ಹಾಜರಾದರೂ, ಗ್ರಾಹಕರು ಬರುವುದು ಹೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ. ಕಾರ್ಯ ಕಲಾಪದ ಆದೇಶವನ್ನು ರದ್ದುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ABOUT THE AUTHOR

...view details