ಕರ್ನಾಟಕ

karnataka

By

Published : Feb 21, 2021, 1:46 PM IST

ETV Bharat / state

ಕಂದಕಕ್ಕೆ ಉರುಳಿದ ಖಾಸಗಿ ಬಸ್: ಏಳು ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಖಾಸಗಿ ಬಸ್ ಕಂದಕ್ಕೆ ಉರುಳಿ ಬಿದ್ದಿದ್ದು, ಏಳು ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಹೊಸಪೇಟೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದಿದೆ.

ಏಳು ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
Seven passengers rescued from bus accident in Hospete

ಹೊಸಪೇಟೆ (ವಿಜಯನಗರ): ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಖಾಸಗಿ ಬಸ್ ಕಂದಕ್ಕೆ ಉರುಳಿ ಬಿದ್ದಿದ್ದು, ಏಳು ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಬೆಂಗಳೂರಿನಿಂದ ಹಗರಿಬೊಮ್ಮನಹಳ್ಳಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕ್ಕೆ ಉರಳಿದೆ. ಘಟನೆಯಲ್ಲಿ ಬಸ್ ಮುಂಭಾಗದ ಗ್ಲಾಸ್ ಹೊಡೆದು ಹೋಗಿದ್ದು, ಒಂದು ಭಾಗ ನಜ್ಜು ಗುಜ್ಜಾಗಿದೆ. ಬಸ್​​​​ನಲ್ಲಿದ್ದ ಏಳು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ABOUT THE AUTHOR

...view details