ಬಳ್ಳಾರಿ: ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ದ ಆವರಣದಲ್ಲಿ ಕಳೆದ ಆರು ತಿಂಗಳಿಂದ ಕಟ್ಟಡದ ಪಕ್ಕದಲ್ಲಿ ಚರಂಡಿ ನೀರು ನಿಂತು ಗಬ್ಬು ನಾರುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಗಬ್ಬು ನಾರುತ್ತಿದೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಹಿಂಭಾಗ - ಬಳ್ಳಾರಿ
ಬಳ್ಳಾರಿಯ 5 ಇಂದಿರಾ ಕ್ಯಾಂಟೀನ್ಗಳಿಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ದ ಹಿಂಭಾಗದ ಕಟ್ಟಡದಲ್ಲಿ ತಿಂಡಿ ಹಾಗೂ ಊಟವನ್ನು ತಯಾರು ಮಾಡುತ್ತಾರೆ. ಆದರೆ ಕಳೆದ ಆರು ತಿಂಗಳಿಂದ ಕಟ್ಟಡದ ಪಕ್ಕದಲ್ಲಿಯೇ ಚರಂಡಿ ನೀರು ನಿಂತು ಗಬ್ಬು ನಾರುತ್ತಿದೆ.
![ಗಬ್ಬು ನಾರುತ್ತಿದೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಹಿಂಭಾಗ Bellary Urban Development Authority](https://etvbharatimages.akamaized.net/etvbharat/prod-images/768-512-7602281-thumbnail-3x2-news.jpg)
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಹಿಂಭಾಗ 6 ತಿಂಗಳಿಂದ ನಿಂತಿರುವ ಕೊಳಚೆ ನೀರು
ನಗರದ 5 ಇಂದಿರಾ ಕ್ಯಾಂಟೀನ್ಗಳಿಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಹಿಂಭಾಗದ ಕಟ್ಟಡದಲ್ಲಿ ತಿಂಡಿ ಹಾಗೂ ಊಟವನ್ನು ತಯಾರಿಸುತ್ತಾರೆ. ಆದರೆ ಕಳೆದ ಆರು ತಿಂಗಳಿಂದ ಕಟ್ಟಡದ ಪಕ್ಕದಲ್ಲಿಯೇ ಚರಂಡಿ ನೀರು ನಿಂತು ಗಬ್ಬು ನಾರುತ್ತಿದೆ.
ಈ ಬಗ್ಗೆ ಇಂದಿರಾ ಕ್ಯಾಂಟೀನ್ ನಿರ್ವಾಹಕರಿಗೆ ಕೇಳಿದರೆ, ಬುಡಾ ಆವರಣದಲ್ಲಿ ಒಳಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ಕಳೆದ ಆರು ತಿಂಗಳಿಂದ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರೂ, ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.