ಕರ್ನಾಟಕ

karnataka

By

Published : Jul 5, 2020, 4:07 PM IST

ETV Bharat / state

ಬಳ್ಳಾರಿ: ಸರಳವಾಗಿ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಆಚರಣೆ

12ನೇ ಶತಮಾನದ ಖ್ಯಾತ ವಚನಕಾರ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಬಳ್ಳಾರಿ ಮತ್ತು ಹೊಸಪೇಟೆಯಲ್ಲಿಂದು ಸರಳವಾಗಿ ಆಚರಿಸಲಾಯಿತು.

Shri hadapada appanna Jayanthi
Shri hadapada appanna Jayanthi

ಬಳ್ಳಾರಿ/ಹೊಸಪೇಟೆ:12ನೇ ಶತಮಾನದ ಖ್ಯಾತ ವಚನಕಾರ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ಜಯಂತಿಯನ್ನು ಬಳ್ಳಾರಿ ಮತ್ತು ಹೊಸಪೇಟೆಯಲ್ಲಿಂದು ಸರಳವಾಗಿ ಆಚರಿಸಲಾಯಿತು.
ಬಳ್ಳಾರಿಯ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ‌ ಭಾವಚಿತ್ರಕ್ಕೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಅವರು ಪೂಜೆ ನೆರವೇರಿಸಿ ಪುಷ್ಪನಮನ ಸಲ್ಲಿಸಿದರು.

ಕೊರೊನಾ ವೈರಾಣು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ, ಸರಳವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ತಾಲೂಕು ಕಚೇರಿಯ ಸಿಬ್ಬಂದಿ ನಮನ ಸಲ್ಲಿಸಿದರು.

ABOUT THE AUTHOR

...view details