ಕರ್ನಾಟಕ

karnataka

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಿದ ಸೋಮಶೇಖರ ರೆಡ್ಡಿ

By

Published : Jan 17, 2021, 12:39 PM IST

ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಅವರು ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಬಳ್ಳಾರಿ ನಗರದಲ್ಲಿ ದೇಣಿಗೆ ಸಂಗ್ರಹಿಸಿದರು.

ಬಳ್ಳಾರಿಯಲ್ಲಿ ದೇಣಿಗೆ ಸಂಗ್ರಹಿಸಿದ ಸೋಮಶೇಖರ ರೆಡ್ಡಿ
ಬಳ್ಳಾರಿಯಲ್ಲಿ ದೇಣಿಗೆ ಸಂಗ್ರಹಿಸಿದ ಸೋಮಶೇಖರ ರೆಡ್ಡಿ

ಬಳ್ಳಾರಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಸಲುವಾಗಿ ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಅವರು ಇಂದು ದೇಣಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು.

ಬಳ್ಳಾರಿಯಲ್ಲಿ ದೇಣಿಗೆ ಸಂಗ್ರಹಿಸಿದ ಸೋಮಶೇಖರ ರೆಡ್ಡಿ

ಇಂದು ಬೆಳಗ್ಗೆ ಸೋಮಶೇಖರ ರೆಡ್ಡಿ ಅವರು ಆಂಜನೇಯಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದುಕೊಂಡು ರಾಮಮಂದಿರ ನಿರ್ಮಾಣಕ್ಕಾಗಿ ಬಳ್ಳಾರಿಯ ಶ್ರೀನಗರ, ರೇಣುಕಾ ನಗರದಲ್ಲಿ ದೇಣಿಗೆ ಸಂಗ್ರಹಿಸಿದರು.

ಈ ವೇಳೆ ಶಾಸಕ ಸೋಮಶೇಖರ ರೆಡ್ಡಿ ಅವರಿಗೆ ಮುಖಂಡರಾದ ಶ್ರೀನಿವಾಸ ಮೋತ್ಕರ್, ಜೆ.ಅನಿಲ್​ ನಾಯ್ಡು ಸೇರಿದಂತೆ ಇನ್ನಿತರೆ ಕಾರ್ಯಕರ್ತರು ಸಾಥ್​ ನೀಡಿದರು.

ABOUT THE AUTHOR

...view details