ಬಳ್ಳಾರಿ: ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯುವ ಅವಧಿಯನ್ನು ವಿಸ್ತರಿಸಲಾಗಿದೆಯೆಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿದ್ದು ಪಿ. ಅಲಗೂರ ತಿಳಿಸಿದ್ದಾರೆ.
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆನ್ಲೈನ್ ಮೂಲಕ ಪ್ರವೇಶದ ಅವಕಾಶ ಕೊಟ್ಟಿರುವುದರಿಂದ ಈ ಬಾರಿ ಪ್ರವೇಶಾತಿ ಪಡೆಯುವವರ ಸಂಖ್ಯೆ ಕಡಿಮೆಯಾಗಿದೆ ಎಂಬ ಆರೋಪ ಸತ್ಯವಲ್ಲ. ಉನ್ನತ ಶಿಕ್ಷಣ ವ್ಯಾಸಂಗ ಮಾಡಲಿಚ್ಛಿಸುವ (ಪಿಜಿ- ಯುಜಿ) ಬಹುತೇಕ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ. ಒಂದೆರೆಡು ಸೀಟುಗಳು ಉಳಿದಿರಬಹುದು. ಅವುಗಳನ್ನೂ ಕೂಡ ಭರ್ತಿ ಮಾಡಿಕೊಳ್ಳಲು ಈಗಾಗಲೇ ಆಯಾ ಕಾಲೇಜಿನ ಪ್ರಾಚಾರ್ಯರಿಗೆ ಸೂಚನೆ ನೀಡಲಾಗಿದೆ ಎಂದರು.
ಆಸಕ್ತ ವಿದ್ಯಾರ್ಥಿಗಳು ನೇರವಾಗಿ ಕಾಲೇಜುಗಳಿಗೆ ಹೋಗಿ ಅರ್ಜಿ ಸಲ್ಲಿಸಿದರೆ, ಆಯಾ ಕಾಲೇಜಿನ ಪ್ರಾಚಾರ್ಯರು ಕ್ರಮವಹಿಸುತ್ತಾರೆಂದು ಪ್ರೊ. ಸಿದ್ದು ಪಿ. ಅಲಗೂರ ತಿಳಿಸಿದ್ದಾರೆ.