ಕರ್ನಾಟಕ

karnataka

ಕಾಲುವೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು.. ಮುಂದುವರಿದ ಶೋಧ ಕಾರ್ಯ

ಹೊಸಪೇಟೆಯಲ್ಲಿ ಈಜಲು ಹೋಗಿ ನೀರುಪಾಲಾದ ವಿದ್ಯಾರ್ಥಿಗಳ ಶೋಧ ಕಾರ್ಯ ಮುಂದುವರೆದಿದೆ ಎಂದು ವಿಜಯನಗರ ಎಸ್​ಪಿ ಶ್ರೀಹರಿಬಾಬು ಹೇಳಿದ್ದಾರೆ.

By

Published : Dec 19, 2022, 5:51 PM IST

Published : Dec 19, 2022, 5:51 PM IST

students-went-swimming-in-the-canal-went-missing
ಕಾಲುವೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು : ಶೋಧ ಕಾರ್ಯ ಮುಂದುವರಿಕೆ

ಕಾಲುವೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು : ಮುಂದುವರಿದ ಶೋಧ ಕಾರ್ಯ

ವಿಜಯನಗರ : ಹೊಸಪೇಟೆಯಲ್ಲಿ ಕಾಲುವೆಯಲ್ಲಿ ಈಜಾಡಲು ಹೋಗಿದ್ದ ವಿದ್ಯಾರ್ಥಿಗಳು ನೀರುಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಪತ್ತೆಯಾಗಿರುವ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ವಿಜಯನಗರ ಎಸ್‌ಪಿ ಶ್ರೀಹರಿಬಾಬು ಅವರು ಮಾಹಿತಿ ನೀಡಿದ್ದಾರೆ.

ಇಂದು ಸಂಜೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, 6 ಜನ ವಿದ್ಯಾರ್ಥಿಗಳು ಸ್ನಾನಕ್ಕೆಂದು ಕಾಲುವೆಗೆ ಇಳಿದಿದ್ದರು. ಇದರಲ್ಲಿ ಮೂವರು ನಾಪತ್ತೆಯಾಗಿದ್ದಾರೆ. ನೀರು ಪಾಲಾದ ವಿದ್ಯಾರ್ಥಿಗಳನ್ನು ಹೊಸಪೇಟೆ ನಗರದ ಖಾಸಗಿ ಕಾಲೇಜಿನ ಬಿಕಾಂ ವಿದ್ಯಾರ್ಥಿ ಅಂಜಿನಿ(18) ಹಾಗೂ ಪಿಯುಸಿ ವಿದ್ಯಾರ್ಥಿಗಳಾದ ಗುಂಡಾ ಗ್ರಾಮದ ಗುರುರಾಜ್(17), ಕೊಪ್ಪಳದ ವಸಂತ್(17) ಎಂದು ಗುರುತಿಸಲಾಗಿದೆ.

ಇವರು ಶನಿವಾರ ಮಧ್ಯಾಹ್ನ ಕಾಲೇಜು ಮುಗಿಸಿಕೊಂಡು ಕೆನಾಲ್‌ನಲ್ಲಿ ಈಜಾಡಲು ಬಂದಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಎಸ್‌ಪಿ ಶ್ರೀಹರಿಬಾಬು ಹೇಳಿದರು.

ಇದೇ ವೇಳೆ ಅಲ್ಲೇ ಬಟ್ಟೆ ತೊಳೆಯುತ್ತಿದ್ದ ಮಹಿಳೆಯೊಬ್ಬರು ಇತರ ವಿದ್ಯಾರ್ಥಿಗಳಾದ ನವೀನ್, ಬಿ.ಹೊಸಳ್ಳಿ ಗ್ರಾಮದ ಗೋಪಿನಾಥ ಮತ್ತು ಹೊಸಪೇಟೆಯ ಶ್ರೀವಲ್ಲಭನನ್ನು ರಕ್ಷಿಸಿದ್ದಾರೆ. ನೀರು ಪಾಲಾದ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ತಿಳಿಸಿದರು.

ಇದನ್ನೂ ಓದಿ :ಬೀದರ್​​: ಕಾಲುವೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ABOUT THE AUTHOR

...view details