ಕರ್ನಾಟಕ

karnataka

By

Published : Mar 18, 2021, 1:58 PM IST

ETV Bharat / state

ಮನೆ ಬೀಗ ಮುರಿದು ಚಿನ್ನ, ಬೆಳ್ಳಿ ಕಳ್ಳತನ

ಮನೆಯ ಬೀಗ ಮುರಿದು ಮನೆಯಲ್ಲಿದ್ದ ಹಣ ಹಾಗೂ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ.

Theft
ಕಳ್ಳತನ

ಬಳ್ಳಾರಿ:ಮೊಮ್ಮಗನ ನಾಮಕರಣಕ್ಕಾಗಿ 10 ದಿನಗಳ ಕಾಲ ಊರಿಗೆ ಹೋದಾಗ ಕಳ್ಳರು ಮನೆ ಚೀಲಕ ಮುರಿದು ಬೀರುವಿನಲ್ಲಿದ್ದ ಬಂಗಾರ, ಬೆಳ್ಳಿ, ನಗದು ಕದ್ದು ಪರಾರಿಯಾದ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ.

ನಗರದ ಕೌಲ್ ಬಜಾರ್ ಪ್ರದೇಶದ ಬ್ಲೂಮನ್ ಐಸ್ ಕ್ರೀಂ ಫ್ಯಾಕ್ಟರಿಯ ಹತ್ತಿರದ ನಾಗರತ್ನ ಅವರ ಮನೆಯಲ್ಲಿ ಕಳ್ಳತವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಕಪಾಟಿನ ಬೀಗ ಮುರಿದು ಅದರಲ್ಲಿದ್ದ 56 ಗ್ರಾಂ ಚಿನ್ನ (ಮೌಲ್ಯ 1,28,800 ರೂಪಾಯಿ), 545 ಗ್ರಾಂ ಬೆಳ್ಳಿ ( ಮೌಲ್ಯದ 16,350 ರೂಪಾಯಿ) ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.

ದೂರಿನ ಪ್ರತಿ

ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details