ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯವಿಲ್ಲ: ಹೆಚ್.ಆಂಜನೇಯ - DIFFERENCE IN THE CONGRESS PARTY

ಕಾಂಗ್ರೆಸ್​ನಲ್ಲಿ ಭಿನ್ನಾಭಿಪ್ರಾಯಗಳು ಇಲ್ಲ.‌ ಅಭಿಪ್ರಾಯಗಳು ಒಂದೇ ಇವೆ. ಕಾಂಗ್ರೆಸ್ ಒಗ್ಗಟ್ಟಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ರಚನೆ ಮಾಡಬೇಕಾಗಿದೆ. ಅಹಿಂದ ಸಮಾವೇಶ‌ ನಡೆಸುವ ಉದ್ದೇಶ ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು.

ಹೆಚ್.ಆಂಜನೇಯ
ಹೆಚ್.ಆಂಜನೇಯ

By

Published : Feb 25, 2021, 7:22 PM IST

ಹೊಸಪೇಟೆ: ಮೈಸೂರು ಪಾಲಿಕೆ ಮೇಯರ್ ಚುನಾವಣೆಯು ಸ್ಥಳೀಯ ನಾಯಕರಿಗೆ ಬಿಟ್ಟ ವಿಚಾರ, ಇದರಲ್ಲಿ ಯಾವ ವಿರೋಧವಿಲ್ಲ. ನಾವೇನಾದರೂ ಬಿಜೆಪಿ ಜತೆಗೆ ಮೇಯರ್ ಸ್ಥಾನಕ್ಕೆ ಹಂಚಿಕೆ ಮಾಡಿಕೊಂಡಿದ್ದರೆ ಅದು ಪಕ್ಷದ ತತ್ವ ಸಿದ್ಧಾಂತಕ್ಕೆ ವಿರುದ್ಧವಾಗುತ್ತಿತ್ತು ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ‌ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ. ಯಾವ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷ ಗೆಲ್ಲುವ ಶಕ್ತಿ ಹೊಂದಿದೆ. ಬಿಜೆಪಿಗೆ ಜನರ ವಿರೋಧವಿದೆ ಎಂದರು.

ಮಾಜಿ ಸಚಿವ ಹೆಚ್.ಆಂಜನೇಯ

ಓದಿ..ಬಡವರ್ಗವನ್ನು ಮತ್ತಷ್ಟು ಕುಗ್ಗಿಸಿದ ಕೋವಿಡ್​ - ಲಾಕ್​ಡೌನ್​​: ಬಾಲಕಾರ್ಮಿಕರ ಪ್ರಮಾಣದಲ್ಲಿ ಹೆಚ್ಚಳ!

ಕಾಂಗ್ರೆಸ್​ನಲ್ಲಿ ಭಿನ್ನಾಭಿಪ್ರಾಯಗಳು ಇಲ್ಲ.‌ ಅಭಿಪ್ರಾಯಗಳು ಒಂದೇ ಇವೆ. ಕಾಂಗ್ರೆಸ್ ಒಗ್ಗಟ್ಟಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ರಚನೆ ಮಾಡಬೇಕಾಗಿದೆ. ಅಹಿಂದ ಸಮಾವೇಶವನ್ನು‌ ನಡೆಸುವ ಉದ್ದೇಶ ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದರು.

ABOUT THE AUTHOR

...view details