ಕರ್ನಾಟಕ

karnataka

ETV Bharat / state

ವಿಜಯನಗರದಲ್ಲಿ ಟ್ರ್ಯಾಕ್ಟರ್‌- ಕಾರು ಡಿಕ್ಕಿ : ಓರ್ವ ಸಾವು, ನಾಲ್ವರಿಗೆ ಗಾಯ - ಭೀಕರ ರಸ್ತೆ ಅಪಘಾತ

ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್‌ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ವಿಜಯನಗರ
vijayanagara

By

Published : Oct 30, 2022, 4:45 PM IST

ವಿಜಯನಗರ: ಟ್ರ್ಯಾಕ್ಟರ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಜರುಗಿದೆ.

ಚಿತ್ರದುರ್ಗ ಜಿಲ್ಲೆಯ ಹಾಲೇಶ (43) ಮೃತ ಟ್ರ್ಯಾಕ್ಟರ್ ಚಾಲಕ. ಈತ ಇಮಡಾಪುರದ ಹೊಸಹಳ್ಳಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ತೆರಳುತ್ತಿದ್ದಾಗ ಮುಂದೆ ಬರುತ್ತಿದ್ದ ಕಾರನ್ನು ಗಮನಿಸಿ ಪಕ್ಕಕ್ಕೆ ಟ್ರ್ಯಾಕ್ಟರ್‌ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಹಾಲೇಶ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವ ಆಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಯಲಹಂಕ ಫ್ಲೈ ಓವರ್ ಡಿವೈಡರ್​ಗೆ ಗುದ್ದಿದ ಬೈಕ್.. ಇಬ್ಬರು ಸಾವು, ಓರ್ವ ಗಂಭೀರ

ಇನ್ನು, ಕಾರಿನಲ್ಲಿದ್ದವರು ಮಹಾರಾಷ್ಟ್ರ ಮೂಲದವರೆಂದು ತಿಳಿದು ಬಂದಿದ್ದು, ರಾಷ್ಟ್ರೀಯ ಹೆದ್ದಾರಿ ಸಹಾಯಕರು ತಕ್ಷಣ ಸ್ಥಳಕ್ಕೆ ಆಗಮಿಸಿ ನಾಲ್ವರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದಾರೆ.

ABOUT THE AUTHOR

...view details