ಕರ್ನಾಟಕ

karnataka

ETV Bharat / state

ಮುಂದಿನ ಬಾರಿ ಯಾವ ಪಕ್ಷಕ್ಕೆ ಮತ, ಯಾರು ಗೆದ್ದರೆ ಉತ್ತಮ?.. ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದವರು ವಶಕ್ಕೆ

ಹೊಸಪೇಟೆ ತಾಲೂಕು ಕೊಂಡನಾಯಕನಹಳ್ಳಿಯಲ್ಲಿ ಅನಧಿಕೃತವಾಗಿ ಮತದಾರರ ಮಾಹಿತಿ ಕಲೆಹಾಕುತ್ತಿದ್ದ 7 ಜನರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆಗೊಳಪಡಿಸಿದ್ದಾರೆ.

By

Published : Dec 22, 2022, 5:32 PM IST

Updated : Dec 22, 2022, 7:41 PM IST

voters information collected unauthorized
ಕೊಂಡನಾಯಕನಹಳ್ಳಿಯಲ್ಲಿ ಅನಧಿಕೃತ ಮತದಾರರ ಮಾಹಿತಿ ಸಂಗ್ರಹ

ಅನಧಿಕೃತ ಮತದಾರರ ಮಾಹಿತಿ ಸಂಗ್ರಹ ಆರೋಪ

ವಿಜಯನಗರ:ಅನಧಿಕೃತವಾಗಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದ 7 ಜನರನ್ನು ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯ ಖಾಸಗಿ ಸರ್ವೇ ಸಂಸ್ಥೆಗೆ ಸೇರಿದ 7 ಜನ ಸಿಬ್ಬಂದಿ ತಾಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಅನಧಿಕೃತವಾಗಿ ಮತದಾರರ ಮಾಹಿತಿ ಕಲೆಹಾಕುತ್ತಿದ್ದರು. ಅನುಮಾನಗೊಂಡ ಸ್ಥಳೀಯರು ಗ್ರಾಮೀಣ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ 7 ಜನರನ್ನು ವಶಕ್ಕೆ ಪಡೆದಿದ್ದಾರೆ.

ಈಗಾಗಲೇ ರಾಜ್ಯದ 12 ವಿಧಾನಸಭಾ ಕ್ಷೇತ್ರಗಳಲ್ಲಿ ಈ ತಂಡ ಸಮೀಕ್ಷೆ ನಡೆಸಿದೆ. ಗುಪ್ತಚರ ಸಂಸ್ಥೆಯಿಂದ ಬಂದಿದ್ದೇವೆಂದು ಹೇಳಿಕೊಂಡಿದ್ದ ತಂಡದ ಸದಸ್ಯರು ವಿಧಾನಸಭೆ ಚುನಾವಣೆ ಕುರಿತು ಪ್ರತಿಯೊಬ್ಬರಿಂದ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದಿದ್ದರಂತೆ.

ಮುಂದಿನ ಚುನಾವಣೆಯಲ್ಲಿ ನೀವು ಯಾವ ಪಕ್ಷಕ್ಕೆ ಮತ ಚಲಾಯಿಸುತ್ತೀರಿ? ಯಾವ ಪಕ್ಷ ಗೆದ್ದರೆ ಉತ್ತಮ? ಎನ್ನುವ ವಿವಿಧ ಪ್ರಶ್ನೆಗಳನ್ನು ಕೇಳಿ ಮಾಹಿತಿ ಕಲೆಹಾಕುತ್ತಿದ್ದರು ಎಂದು ತಿಳಿದುಬಂದಿದೆ. ಸರ್ವೇ ನಡೆಸುತ್ತಿದ್ದವರ ಬಳಿ ಖಾಸಗಿ ಕಂಪನಿಯ ಐ.ಡಿ. ಕಾರ್ಡ್‌ಗಳು ಪತ್ತೆಯಾಗಿವೆ.

ಈ ತಂಡ ಯಾವುದೇ ಬಗೆಯ ಅನುಮತಿ ಪಡೆದಿದೆಯಾ? ಯಾರು ಅನುಮತಿ ಕೊಟ್ಟಿದ್ದಾರೆ ಎನ್ನುವುದರ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸದ್ಯಕ್ಕೆ ಯಾವುದೇ ದೂರು ದಾಖಲಾಗಿಲ್ಲ.

ಇದನ್ನೂಓದಿ:ಸೇನಾ ಸಮವಸ್ತ್ರ ಧರಿಸಿ ವಂಚನೆ: ಆರೋಪಿ ಬಂಧಿಸಿದ ಎಸ್‌ಟಿಎಫ್

Last Updated : Dec 22, 2022, 7:41 PM IST

ABOUT THE AUTHOR

...view details