ಕರ್ನಾಟಕ

karnataka

ETV Bharat / state

ಕುಡಿದ ಅಮಲಿನಲ್ಲಿ ಹೆಂಡತಿಯನ್ನೇ ಕೊಚ್ಚಿ ಕೊಲೆ ಮಾಡಿದ ಪತಿರಾಯ! - ಕೂಡ್ಲಿಗಿ ತಾಲೂಕಿನ ಪಾಲಯ್ಯನ ಕೋಟೆಯಲ್ಲಿ ಮಹಿಳೆ ಕೊಲೆ

ಕೌಟುಂಬಿಕ ಕಲಹದ ಕಾರಣ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ..

wife-killed-by-husband-in-hosapete
ಕೊಲೆ

By

Published : Mar 15, 2021, 5:28 PM IST

ಹೊಸಪೇಟೆ :ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಪಾಲಯ್ಯನ ಕೋಟೆಯಲ್ಲಿ ಮದ್ಯವ್ಯಸನಿಯೊಬ್ಬ ಕೊಡಲಿಯಿಂದ ತನ್ನ ಹೆಂಡತಿಯನ್ನ ಕೊಚ್ಚಿ ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಶಾಂತಮ್ಮ(25) ಕೊಲೆಯಾದ ಮಹಿಳೆ. ಪತಿ ಮಂಜುನಾಥ್ ಕೊಲೆ‌ ಮಾಡಿದ ಆರೋಪಿ. ಮಹಿಳೆಯು ಕಳೆದ 20 ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ.‌ ಮಡಿಲಲ್ಲಿ ಹಸುಗೂಸನ್ನು ಎತ್ತಿಕೊಂಡು ಕುಳಿತಿದ್ದಾಗಲೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಮೃತ ದೇಹ ವಿಡಿಯೋದಲ್ಲಿ ಸೆರೆ

ಓದಿ:ಮೊದಲ ಬಾರಿಗೆ ಭದ್ರತಾ ಕಾಯ್ದೆ, ಜಾಮೀನು ಷರತ್ತು ಉಲ್ಲಂಘಿಸಿದ ಆರೋಪಿ ಬಂಧನ

ಕೌಟುಂಬಿಕ ಕಲಹದ ಕಾರಣ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ABOUT THE AUTHOR

...view details