ಕರ್ನಾಟಕ

karnataka

By

Published : Sep 17, 2020, 10:47 PM IST

ETV Bharat / state

ಪ್ರವಾಹದ ಅಬ್ಬರಕ್ಕೆ ಗದಗ ಜಿಲ್ಲೆಯಲ್ಲಿ 158 ಕೋಟಿ ಹಾನಿ: ಸಚಿವ ಆರ್.ಅಶೋಕ

ಮಲಪ್ರಭಾ ನದಿ ಒತ್ತುವರಿ ಆಗಿರುವುದರಿಂದ ಪ್ರವಾಹ ಸ್ಥಿತಿ ಉಂಟಾಗುತ್ತಿದೆ. ಆದಷ್ಟು ಬೇಗ ಸರ್ವೇ ಕಾರ್ಯ ನಡೆಸಿ ಒತ್ತುವರಿ ತೆರವು ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್​ ತಿಳಿಸಿದ್ದಾರೆ.

158 crores damaged in floods in Gadag district: Minister R. Ashok
ಪ್ರವಾಹದ ಅಬ್ಬರಕ್ಕೆ ಗದಗ ಜಿಲ್ಲೆಯಲ್ಲಿ 158 ಕೋಟಿ ಹಾನಿಯಾಗಿದೆ: ಸಚಿವ ಆರ್.ಅಶೋಕ್​

ಗದಗ:ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹದ ಅಬ್ಬರಕ್ಕೆ ಜಿಲ್ಲೆಯಲ್ಲಿ 158 ಕೋಟಿ ಹಾನಿ ಸಂಭವಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ.

ಗದಗ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಪ್ರವಾಹದಿಂದಾಗಿ ಜಿಲ್ಲೆಯಲ್ಲಿ 158 ಕೋಟಿ ಹಾನಿಯಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ಅಕೌಂಟ್​ನಲ್ಲಿ 12 ಕೋಟಿ 87 ಲಕ್ಷ ರೂಪಾಯಿ ಇದೆ. ಅದನ್ನು ಬಳಕೆ ಮಾಡಿಕೊಂಡು ಅಭಿವೃದ್ಧಿ ಕೆಲಸ ಮಾಡಬಹುದು. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ದೆಹಲಿಗೆ ಹೋಗಿದ್ದು, ಹೆಚ್ಚಿನ ಅನುದಾನವನ್ನು ತರಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ಪ್ರವಾಹದ ಅಬ್ಬರಕ್ಕೆ ಗದಗ ಜಿಲ್ಲೆಯಲ್ಲಿ 158 ಕೋಟಿ ಹಾನಿಯಾಗಿದೆ: ಸಚಿವ ಆರ್.ಅಶೋಕ್​

ಇನ್ನು, ಮಲಪ್ರಭಾ ನದಿ ಒತ್ತುವರಿ ಆಗಿರುವುದರಿಂದ ಪ್ರವಾಹ ಸ್ಥಿತಿ ಉಂಟಾಗುತ್ತಿದೆ. ಈಗಾಗಲೇ ಸಿಎಂ ನೇತೃತ್ವದಲ್ಲಿ ಆಲಮಟ್ಟಿಯಲ್ಲಿ ಸಭೆ ನಡೆಸಲಾಗಿದೆ. ಆದಷ್ಟು ಬೇಗ ಸರ್ವೇ ಕಾರ್ಯ ನಡೆಸಿ ಒತ್ತುವರಿ ತೆರವು ಮಾಡಲಾಗುವುದು. ಜೊತೆಗೆ ಪ್ರವಾಹಕ್ಕೆ ತುತ್ತಾಗಿರುವ ಪ್ರದೇಶಗಳಿಗೆ ಶಾಶ್ವತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ABOUT THE AUTHOR

...view details