ಬಸವಕಲ್ಯಾಣ (ಬೀದರ್) : ವೃದ್ದರೊಬ್ಬರು ಮಲಗಿದ ಸ್ಥಿತಿಯಲ್ಲಿಯೇ ಪ್ರಾಣ ಬಿಟ್ಟ ಘಟನೆ ನಗರದ ಎಪಿಎಂಸಿ ಪ್ರಾಂಗಣದಲ್ಲಿ ನಡೆದಿದೆ.
ಮಲಗಿದಲ್ಲೇ ಪ್ರಾಣ ಬಿಟ್ಟ ವೃದ್ಧ.. ಕಾರಣ? - old man died in Basavakalyan,
ವೃದ್ದರೊಬ್ಬರು ಮಲಗಿದ ಸ್ಥಿತಿಯಲ್ಲಿಯೇ ಪ್ರಾಣ ಬಿಟ್ಟ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

ಮಲಗಿದಲ್ಲೇ ಪ್ರಾಣ ಬಿಟ್ಟ ವೃದ್ಧ
ತಾಲೂಕಿನ ಆಲಗೂಡ ಗ್ರಾಮದ ನಿವಾಸಿ ಬಳಿರಾಮ ಚಿಟಂಪಲ್ಲೆ (60) ಮೃತ ವ್ಯಕ್ತಿ. ಅನಾರೋಗ್ಯದಿಂದ ಬಳಲುತ್ತಿದ್ದ ಈತ ಕಳೆದ ಕೆಲ ದಿನಗಳಿಂದ ಮನೆ ಬಿಟ್ಟು ನಗರದಲ್ಲಿಯೇ ಅಲೆದಾಡುತ್ತಿದ್ದ ಎನ್ನಲಾಗಿದೆ.
ಮಲಗಿದಲ್ಲೇ ಪ್ರಾಣ ಬಿಟ್ಟ ವೃದ್ಧ
ರಸ್ತೆ ಪಕ್ಕ ಮಲಗಿದ್ದ ಬಳಿರಾಮ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಸುದ್ದಿ ತಿಳಿದ ಸಿಪಿಐ ಜೆ.ಎಸ್.ನ್ಯಾಮಗೌಡರ್ ಹಾಗೂ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮೃತ ದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.