ಕರ್ನಾಟಕ

karnataka

ಬಸವಣ್ಣನವರ ಕಾಯಕ ಭೂಮಿಯಲ್ಲಿ ಸರಳ ಜಯಂತಿ ಆಚರಣೆ

By

Published : Apr 26, 2020, 11:03 PM IST

ಬಸವಣ್ಣನವರ ಕಾಯಕ ಭೂಮಿ ಬಸವಕಲ್ಯಾಣದಲ್ಲಿ 887ನೇ ಬಸವ ಜಯಂತಿ ಮಹೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ದೇವಸ್ಥಾನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಾಸಕ ಬಿ.ನಾರಾಯಣರಾವ್ ಧ್ವಜಾರೋಹಣ ನೆರವೇರಿಸಿದರು.

Basava Jayanti celebration in Basavakalyana
ಬಸವಣ್ಣನ ಕಾಯಕ ಭೂಮಿಯಲ್ಲಿ ಸರಳ ಜಯಂತಿ ಆಚರಣೆ

ಬಸವಕಲ್ಯಾಣ(ಬೀದರ್): ಸಮಾನತೆಯ ಹರಿಕಾರ, ಕ್ರಾಂತಿಯೋಗಿ ವಿಶ್ವಗುರು ಬಸವಣ್ಣನವರ ಕಾಯಕ ಭೂಮಿ ಬಸವಕಲ್ಯಾಣದಲ್ಲಿ 887ನೇ ಬಸವ ಜಯಂತಿ ಮಹೋತ್ಸವವನ್ನು ಸರಳವಾಗಿ ಆಚರಿಸಲಾಯಿತು.

ಬಸವಣ್ಣನವರ ಕಾಯಕ ಭೂಮಿಯಲ್ಲಿ ಸರಳ ಜಯಂತಿ ಆಚರಣೆ

ಬಸವ ಜಯಂತಿ ನಿಮಿತ್ತ ಶ್ರೀ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ, ವಿಶ್ವಸ್ಥ ಸಮಿತಿಯಿಂದ ನಗರದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ನಡೆಯುತಿದ್ದ ಮಹಾತ್ಮ ಬಸವೇಶ್ವರ ಜಾತ್ರಾ ಮಹೋತ್ಸವವನ್ನು ಕೊರೊನಾ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇನ್ನು ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಬಸವ ಜಯಂತಿ ಆಚರಿಸಲಾಯಿತು.

ದೇವಸ್ಥಾನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಾಸಕ ಬಿ.ನಾರಾಯಣರಾವ್ ಧ್ವಜಾರೋಹಣ ನೆರವೇರಿಸಿದರು. ಡಾ. ಗಂಗಾಬಿಕಾ ಅಕ್ಕ ವಚನ ಪಠಣ ಮಾಡಿಸಿದರು.

ABOUT THE AUTHOR

...view details