ಬಸವಕಲ್ಯಾಣ: ಮಹಾಮಾರಿ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರಿದಿದ್ದು, ಕೆಲ ದಿನಗಳ ಹಿಂದೆ ಇಲ್ಲಿನ ನಗರಸಭೆಯ ಬಿಜೆಪಿ ಸದಸ್ಯರೊಬ್ಬರನ್ನು ಬಲಿ ಪಡೆದಿದ್ದ ಕೊರೊನಾ ಸೋಂಕು, ಮಂಗಳವಾರ ಮತ್ತೊಬ್ಬ ಸದಸ್ಯರನ್ನು ಬಲಿ ಪಡೆದಿದೆ.
ನಗರದ ತ್ರಿಪುರಾಂತನ ವಾರ್ಡ್ ಸಂಖ್ಯೆ-23ರ ನಗರಸಭೆ ಸದಸ್ಯೆ ಲಲಿತಾಬಾಯಿ ಗಣಪತಿರಾವ್ ಡಾಂಗೆ (58) ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ಏಪ್ರಿಲ್ 16ರಂದು ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಅವರನ್ನು ಕಲಬುರ್ಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮಂಗಳವಾರ ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ಖಚಿತ ಪಡಿಸಿವೆ. ಮೃತರು ಪತಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂಧು - ಬಳಗವನ್ನು ಅಗಲಿದ್ದಾರೆ.