ಕರ್ನಾಟಕ

karnataka

ETV Bharat / state

ಬೀದರ್: ನಕಲು ಮುಕ್ತ ಪರೀಕ್ಷೆ ನಡೆಸಲು ಸಚಿವ ಪ್ರಭು ಚವ್ಹಾಣ್​ ಸೂಚನೆ - Bidar Education Department Officers Meeting

ಎಸ್ಎಸ್ಎಲ್​ಸಿ ಪರೀಯನ್ನು ನಕಲು ಮುಕ್ತವಾಗಿ ನಡೆಸುವುದಲ್ಲದೆ ಕೊವಿಡ್-19 ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್​ ಸೂಚನೆ ನೀಡಿದರು.

Bidar: Prabhu Chauhan instructed officers to conduct a copy free exam
ಬೀದರ್: ನಕಲು ಮುಕ್ತ ಪರೀಕ್ಷೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸೂಚನೆ...!

By

Published : Jun 19, 2020, 7:02 PM IST

ಬೀದರ್: ಎಸ್ಎಸ್ಎಲ್​ಸಿ ಪರೀಕ್ಷೆಯನ್ನು ನಕಲು ಮುಕ್ತವಾಗಿ ನಡೆಸುವುದಲ್ಲದೆ ಕೊವಿಡ್-19 ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್​ ಸೂಚನೆ ನೀಡಿದರು.

ಬೀದರ್: ನಕಲು ಮುಕ್ತ ಪರೀಕ್ಷೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸೂಚನೆ

ನಗರದ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ನಡೆದ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೀದರ್ ಜಿಲ್ಲೆಯನ್ನು 'ಕಾಪಿ ಮುಕ್ತ' ಜಿಲ್ಲೆಯಾಗಿ ಮಾಡಬೇಕಾಗಿದೆ. ಹೀಗಾಗಿ ಪರಿಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು ಅಗತ್ಯ ಕ್ರಮಗಳನ್ನ ಕೈಗೊಳ್ಳಬೇಕು ಎಂದರು.

ಅಲ್ಲದೆ ಕೊವಿಡ್-19 ನಿಯಂತ್ರಣ ಹಿನ್ನೆಲೆ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸ್ಯಾನಿಟೆಸರ್, ಮಾಸ್ಕ್ ಬಳಕೆ ಆಗಲೇಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ‌ ಎಂದರು.

ಈ ವೇಳೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮಾತನಾಡಿ, ಮುಂದಿನ ಐದು ದಿನಗಳು ಶಿಕ್ಷಕರು ಹತ್ತನೇ ತರಗತಿ ಮಕ್ಕಳಿಗೆ ಪುನರ್​ ಮನನ ಮಾಡಿಸಿ, ಕನಿಷ್ಠ 35 ಪ್ರತಿಶತ ಅಂಕಗಳನ್ನು ಪಡೆದು ಉತ್ತೀರ್ಣರಾಗಲು ಉತ್ತೇಜಿಸಿ. ಲಾಕ್​​ಡೌನ್ ಅಭ್ಯಾಸದ ಮೇಲೆ ಪರಿಣಾಮ ಬೀರಿದೆ ನಿಜ. ಆದರೆ ಶೇ. 100 ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳಿ. ವಿಧ್ಯಾರ್ಥಿಗಳಿಗೆ ಧೈರ್ಯ ತುಂಬಿ ಪರೀಕ್ಷೆಗೆ ಸಿದ್ಧಗೊಳಿಸುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಖಾಸಗಿ ಶಾಲೆಗಳ ಡೊನೇಷನ್ ಕಡಿಮೆ ಮಾಡಿ:

ಇದೇ ವೇಳೆ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಸಭೆ ನಡೆಸಿದ ಸಚಿವ ಪ್ರಭು ಚವ್ಹಾಣ್​, ಕೊರೊನಾದಿಂದಾಗಿ ಜಿಲ್ಲೆಯ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಮಕ್ಕಳ ಭವಿಷ್ಯ ರೂಪಿಸಬೇಕಾದ ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ಕಡಿಮೆ ಮಾಡಿ ಯಾವುದೇ ಕಾರಣಕ್ಕೂ ಹೆಚ್ಚಿನ ಶುಲ್ಕ ವಿಧಿಸಬೇಡಿ ಎಂದು ಮನವಿ ಮಾಡಿದರು.

ABOUT THE AUTHOR

...view details