ಕರ್ನಾಟಕ

karnataka

By

Published : Apr 17, 2023, 6:19 PM IST

Updated : Apr 17, 2023, 9:38 PM IST

ETV Bharat / state

ರಾಜ್ಯದಲ್ಲಿ ಕಾಂಗ್ರೆಸ್​​ ಸರ್ಕಾರ ಆಡಳಿತಕ್ಕೆ ಬರುವುದು ನಿಶ್ಚಿತ: ರಾಹುಲ್ ಗಾಂಧಿ ಭವಿಷ್ಯ

ರಾಜ್ಯದಲ್ಲಿ ಕಾಂಗ್ರೆಸ್​ ಪರವಾಗಿ ಅಲೆ ಇದೆ. ಈ ಬಾರಿ ನಿಶ್ಚಿತವಾಗಿಯೂ ಪಕ್ಷ​​ ಅಧಿಕಾರಕ್ಕೆ ಬರುತ್ತದೆ ಎಂದು ರಾಹುಲ್​ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದರು.

congress-will-come-to-power-in-karnataka-says-rahul-gandhi
ರಾಜ್ಯದಲ್ಲಿ ನಿಶ್ಚಿತವಾಗಿಯೂ ಕಾಂಗ್ರೆಸ್​​ ಸರ್ಕಾರ ಆಡಳಿತಕ್ಕೆ ಬರುತ್ತದೆ : ರಾಹುಲ್ ಗಾಂಧಿ

ರಾಜ್ಯದಲ್ಲಿ ಕಾಂಗ್ರೆಸ್​​ ಸರ್ಕಾರ ಆಡಳಿತಕ್ಕೆ ಬರುವುದು ನಿಶ್ಚಿತ: ರಾಹುಲ್ ಗಾಂಧಿ ಭವಿಷ್ಯ

ಬೀದರ್ : ರಾಜ್ಯದೆಲ್ಲೆಡೆ ಕಾಂಗ್ರೆಸ್ ಪರವಾದ ಅಲೆ ಇದ್ದು, ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರಲಿದೆ. ಆದರೆ 40 ಪರ್ಸೆಂಟ್ ಕಮಿಷನ್ ಪಡೆವ ಬಿಜೆಪಿಯವರು ಶಾಸಕರನ್ನು ಖರೀದಿಸಲು ಮುಂದಾಗುವ ಸಾಧ್ಯತೆ ಇದೆ. ಹೀಗಾಗಿ ಪೂರ್ಣ ಬಹುಮತ ನೀಡಬೇಕು. 150 ಸೀಟುಗಳನ್ನು ಗೆದ್ದು ಆಡಳಿತ ನಡೆಸಲು ರಾಜ್ಯದ ಜನತೆ ಬೆಂಬಲಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ಭಾಲ್ಕಿ ಮತ್ತು ಹುಮನಾಬಾದ್‌ನಲ್ಲಿ ಜನ ಕ್ರಾಂತಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ನಾವೆಲ್ಲರೂ ನೋಡಿದ್ದೇವೆ. ಬಿಜೆಪಿ ಆಡಳಿತದಲ್ಲಿ ಎಲ್ಲ ಕೆಲಸಕ್ಕೂ ಮೊದಲು 40 ಪರ್ಸೆಂಟ್ ಕಮಿಷನ್ ಪಡೆದ ನಂತರವೇ ಮುಂದಿನ ಚಟುವಟಿಕೆ ನಡೆಯುತ್ತಿದ್ದವು. ಈ ಬಗ್ಗೆ ಖುದ್ದು ಗುತ್ತಿಗೆದಾರರ ಸಂಘವು ಪ್ರಧಾನಿ ಅವರಿಗೆ ಪತ್ರ ಬರೆದಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೊದಲ ದಿನವೇ ಕಾಂಗ್ರೆಸ್ ನೀಡಿದ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು. ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್, ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂ. ಪ್ರೋತ್ಸಾಹ ಧನ, ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಮತ್ತು ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡುವ ಗ್ಯಾರಂಟಿ ಯೋಜನೆಗಳು ಜಾರಿಗೆ ತರಲಾಗುವುದು ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗಾಗಿ 371(ಜೆ) ಜಾರಿ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಈ ಕೆಲಸ ಮಾಡಲು ಆಗಲ್ಲ ಎಂದು ಬಿಜೆಪಿ ಹೇಳಿತ್ತು. ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಗಮನಕ್ಕೆ ತಂದಾಗ ಇದನ್ನು ಜಾರಿಗೆ ತರಲು ತಕ್ಷಣ ಕ್ರಮಕೈಗೊಳ್ಳಲಾಯಿತು. ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಿ ನುಡಿದಂತೆ ನಡೆಯುವ ಕಾಂಗ್ರೆಸ್‌ಗೆ ಅವಕಾಶ ನೀಡಬೇಕು ಎಂದು ಇದೇ ವೇಳೆ ಕೇಳಿಕೊಂಡರು.

ಕೇಂದ್ರ ಸರ್ಕಾರದ ಕಾರ್ಯದರ್ಶಿ ಹುದ್ದೆಯಲ್ಲಿ ಶೇ.7ರಷ್ಟು ಮಾತ್ರ ದಲಿತ, ಹಿಂದುಳಿದ ವರ್ಗ, ಆದಿವಾಸಿ ಸಮುದಾಯಕ್ಕೆ ಸೇರಿದ ಅಧಿಕಾರಿಗಳು ಇದ್ದಾರೆ. ಇದನ್ನು ಗಮನಿಸಿದರೆ ಕೇಂದ್ರ ಸರ್ಕಾರಕ್ಕೆ ಹಿಂದುಳಿದ ವರ್ಗದವರ ಮೇಲಿರುವ ಕಾಳಜಿ ಗೊತ್ತಾಗುತ್ತದೆ. ಪ್ರಧಾನಿ ಮೋದಿ ಅವರಿಗೆ ಹಿಂದುಳಿದ ವರ್ಗಗಳು, ದಲಿತರ ಬಗ್ಗೆ ಕಾಳಜಿ ಇದ್ದರೆ ಶೇ.50ಕ್ಕೆ ನಿಗದಿಯಾಗಿರುವ ಮಿತಿಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಹಿಂದುಳಿದ ವರ್ಗ, ದಲಿತ ಸಮುದಾಯದ ಅಭಿವೃದ್ಧಿ ಬಿಜೆಪಿಗೆ ಬೇಕಾಗಿಲ್ಲ. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಮಾಡಿದ ಜನಗಣತಿ ಅಂಕಿಅಂಶಗಳನ್ನು ಬಹಿರಂಗಪಡಿಸಬೇಕು. ಜನಗಣತಿ ಆಧಾರದ ಮೇಲೆ ಮೀಸಲಾತಿ ನೀಡಿ ಹಿಂದುಳಿದ ಸಮುದಾಯಕ್ಕೆ ನ್ಯಾಯ ನೀಡಬೇಕು ಎಂದು ಒತ್ತಾಯಿಸಿದರು.

ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲ, ಕಾರ್ಯದರ್ಶಿ ಶ್ರೀಧರ ಬಾಬು, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ, ಕಾಂಗ್ರೆಸ್ ಅಭ್ಯರ್ಥಿಗಳಾದ ಈಶ್ವರ ಖಂಡ್ರೆ, ರಹೀಮ್ ಖಾನ್, ವಿಜಯಸಿಂಗ್, ಅಶೋಕ ಖೇಣಿ, ಭೀಮಸೇನರಾವ್ ಸಿಂಧೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ :ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ: ಇಂದೇ 3ನೇ ಪಟ್ಟಿ ಬಿಡುಗಡೆ ಸಾಧ್ಯತೆ

Last Updated : Apr 17, 2023, 9:38 PM IST

ABOUT THE AUTHOR

...view details